Advertisement
ಸುದ್ದಿಗಳು

ಭಾರಿ ತಿಮಿಂಗಿಲಕ್ಕೆ ಬಲೆ ಬೀಸಿದ ಲೋಕಾಯುಕ್ತ | ಶಾಸಕನ ಪುತ್ರನ ಬಳಿ 8.12 ಕೋಟಿ ಪತ್ತೆ| ಬರೆದಿದ್ದ ದಾಖಲೆ ಅಗಿದು ನುಂಗಿದ ಭೂಪ…! |

Share

 ದಾವಣಗೆರೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೋಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಾರಣ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜಿನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವಸ್ತುಗಳ ಖರೀದಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಕೌಂಟೆಂಗ್ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದರು. 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.

ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 8.12 ಕೋಟಿ ಕಂತೆ‌ ಕಂತೆ ಹಣ ಸಿಕ್ಕಿದೆ. ಆದರೂ ಇದು ನನ್ನ ಕುಟುಂಬದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ, ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರುಪಾಕ್ಷಪ್ಪ ಹೇಳಿದ್ದಾರೆ.

ಲೋಕಾಯುಕ್ತ ದಾಳಿಯಿಂದ ಶಾಸಕ ಮಡಾಳ್ ವಿರೂಪಾಕ್ಷಪ್ಪ ಈ ತನಕ ಮಾಡಿರುವ ಭ್ರಷ್ಟಾಚಾರ ಪ್ರಕರಣ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಕೆ.ಎಸ್.ಡಿ.ಎಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಆಗಿರೋ ಶಂಕೆ ವ್ಯಕ್ತವಾಗಿದೆ.

ಪ್ರಶಾಂತ್ ಬ್ಯಾಂಕ್ ಖಾತೆಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಹಿನ್ನೆಲೆ ಅಕೌಂಟ್ ಗಳ  ಪರಿಶೀಲನೆಗೂ ಮುಂದಾಗಿದ್ದಾರೆ. ಪ್ರಶಾಂತ್ ಮಡಾಳ್ ಮತ್ತು ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಅಕೌಂಟ್ ಟ್ರಾಂಜಾಕ್ಷನ್ ಬಗ್ಗೆ ಗಮನ ಹರಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಪ್ರಶಾಂತ್ ತಾನು ಬರೆದಿದ್ದ ಕೆಲವು ದಾಖಲೆಗಳನ್ನು ಅಗಿದು ನುಂಗಿದ್ದಾನೆ. ತರುವಾಯ ಲೋಕಾಯುಕ್ತರು ಅದನ್ನೆಲ್ಲಾ ವಾಂತಿ ಮಾಡಿಸಿ ಅಧಿಕಾರಿಗಳು ತೆಗೆದಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

19 minutes ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

12 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

13 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago