Advertisement
ಸುದ್ದಿಗಳು

ಭಾರಿ ತಿಮಿಂಗಿಲಕ್ಕೆ ಬಲೆ ಬೀಸಿದ ಲೋಕಾಯುಕ್ತ | ಶಾಸಕನ ಪುತ್ರನ ಬಳಿ 8.12 ಕೋಟಿ ಪತ್ತೆ| ಬರೆದಿದ್ದ ದಾಖಲೆ ಅಗಿದು ನುಂಗಿದ ಭೂಪ…! |

Share

 ದಾವಣಗೆರೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೋಲೀಸರು ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಾರಣ ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ರಾಜಿನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವಸ್ತುಗಳ ಖರೀದಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಕೌಂಟೆಂಗ್ ಪ್ರಶಾಂತ್ ಮಾಡಾಳ್ ಗುತ್ತಿಗೆದಾರರಿಂದ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದರು. 40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.

ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟು 8.12 ಕೋಟಿ ಕಂತೆ‌ ಕಂತೆ ಹಣ ಸಿಕ್ಕಿದೆ. ಆದರೂ ಇದು ನನ್ನ ಕುಟುಂಬದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ. ಆದ್ರೂ ನನ್ನ ಮೇಲೆ ಆಪಾದನೆ ಬಂದಿರುವುದರಿಂದ, ನೈತಿಕ ಹೊಣೆ ಹೊತ್ತು KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರುಪಾಕ್ಷಪ್ಪ ಹೇಳಿದ್ದಾರೆ.

ಲೋಕಾಯುಕ್ತ ದಾಳಿಯಿಂದ ಶಾಸಕ ಮಡಾಳ್ ವಿರೂಪಾಕ್ಷಪ್ಪ ಈ ತನಕ ಮಾಡಿರುವ ಭ್ರಷ್ಟಾಚಾರ ಪ್ರಕರಣ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಕೆ.ಎಸ್.ಡಿ.ಎಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಆಗಿರೋ ಶಂಕೆ ವ್ಯಕ್ತವಾಗಿದೆ.

ಪ್ರಶಾಂತ್ ಬ್ಯಾಂಕ್ ಖಾತೆಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಹಿನ್ನೆಲೆ ಅಕೌಂಟ್ ಗಳ  ಪರಿಶೀಲನೆಗೂ ಮುಂದಾಗಿದ್ದಾರೆ. ಪ್ರಶಾಂತ್ ಮಡಾಳ್ ಮತ್ತು ಕುಟುಂಬಸ್ಥರ ಅಕೌಂಟ್ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಅಕೌಂಟ್ ಟ್ರಾಂಜಾಕ್ಷನ್ ಬಗ್ಗೆ ಗಮನ ಹರಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಪ್ರಶಾಂತ್ ತಾನು ಬರೆದಿದ್ದ ಕೆಲವು ದಾಖಲೆಗಳನ್ನು ಅಗಿದು ನುಂಗಿದ್ದಾನೆ. ತರುವಾಯ ಲೋಕಾಯುಕ್ತರು ಅದನ್ನೆಲ್ಲಾ ವಾಂತಿ ಮಾಡಿಸಿ ಅಧಿಕಾರಿಗಳು ತೆಗೆದಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

4 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

6 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

10 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

13 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

14 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago