ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ, ದೇಶೀಯ ಮತ್ತು ಜಾಗತಿಕ ಬೇಡಿಕೆ ಪೂರೈಕೆಗಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು ಮಾಡಿಕೊಳ್ಳುವ ಔಷಧಗಳ ಪರೀಕ್ಷೆಗೆ, ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ, ಎಂಟು ಮಿನಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು ಶೇಕಡ 95 ರಷ್ಟು ನಿಯಂತ್ರಣಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ ಇದೀಗ ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490