ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ, ದೇಶೀಯ ಮತ್ತು ಜಾಗತಿಕ ಬೇಡಿಕೆ ಪೂರೈಕೆಗಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು ಮಾಡಿಕೊಳ್ಳುವ ಔಷಧಗಳ ಪರೀಕ್ಷೆಗೆ, ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ, ಎಂಟು ಮಿನಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು ಶೇಕಡ 95 ರಷ್ಟು ನಿಯಂತ್ರಣಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ ಇದೀಗ ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…