ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ, ದೇಶೀಯ ಮತ್ತು ಜಾಗತಿಕ ಬೇಡಿಕೆ ಪೂರೈಕೆಗಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು ಮಾಡಿಕೊಳ್ಳುವ ಔಷಧಗಳ ಪರೀಕ್ಷೆಗೆ, ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ, ಎಂಟು ಮಿನಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು ಶೇಕಡ 95 ರಷ್ಟು ನಿಯಂತ್ರಣಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ ಇದೀಗ ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…