ಜಾಗತಿಕ ಆರೋಗ್ಯ ಭದ್ರತೆ ಮತ್ತು ಸುಸ್ಥಿರತೆಗೆ ಭಾರತ ಬದ್ಧವಾಗಿ ನಿಂತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಔಷಧ ನಿಯಂತ್ರಣಾ ಸಂಸ್ಥೆಗಳ 19ನೇ ಅಂತಾರಾಷ್ಟ್ರೀಯ ಸಮಾವೇಶದ ಉದ್ವಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ, ಕೋವಿಡ್ ಸಾಂಕ್ರಾಮಿಕದ ವೇಳೆ, ಆರೋಗ್ಯ ಸ್ಥಿತಿ ಸ್ಥಾಪಕತ್ವದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ, ಔಷಧ ಪ್ರಪಂಚದಲ್ಲಿ ತನ್ನ ಪಾತ್ರವನ್ನುನಿರೂಪಿಸಿದೆ. ಭಾರತ, ಆರೋಗ್ಯ ರಕ್ಷಣೆ,ಮೂಲಸೌಕರ್ಯವನ್ನು ವಿಸ್ತರಿಸಿದ್ದು, ಮಾತ್ರವಲ್ಲದೆ, ದೇಶೀಯ ಮತ್ತು ಜಾಗತಿಕ ಬೇಡಿಕೆ ಪೂರೈಕೆಗಾಗಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಿದೆ. ಪ್ರಮುಖ ಔಷಧಗಳು ಮತ್ತು ಲಸಿಕೆಗಳು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಆಮದು ಮಾಡಿಕೊಳ್ಳುವ ಔಷಧಗಳ ಪರೀಕ್ಷೆಗೆ, ವಿವಿಧ ಎಂಟು ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ ಎರಡು ಪ್ರಯೋಗಾಲಯಗಳು ಸ್ಥಾಪನೆಯಾಗುವ ಅಂತಿಮ ಹಂತದಲ್ಲಿವೆ. ಬಂದರುಗಳಲ್ಲಿ, ಎಂಟು ಮಿನಿ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸದ್ಯ ಸುಮಾರು ಶೇಕಡ 95 ರಷ್ಟು ನಿಯಂತ್ರಣಾ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ವೈದ್ಯಕೀಯ ಉಪಕರಣಗಳ ಉದ್ಯಮವನ್ನೂ ಇದೀಗ ನಿಯಂತ್ರಣಕ್ಕೊಳಪಡಿಸಲಾಗಿದೆ ಎಂದು ನಡ್ಡಾ ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…