Advertisement
MIRROR FOCUS

#HeavyRain| ಉತ್ತರ ಭಾರತದಲ್ಲಿ ವರುಣನ ಅಬ್ಬರ | ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು | ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ |

Share

ದಿನದಿಂದ ದಿನಕ್ಕೆ ಉತ್ತರ ಭಾರತದಲ್ಲಿ ವರುಣನ ಅರ್ಭಟ ಹೆಚ್ಚಾಗುತ್ತಿದೆ. ಹಿಮಾಚಲಪ್ರದೇಶ #HimachalPradesh  ಮತ್ತು ಉತ್ತರಾಖಂಡದಲ್ಲಿ#Uttarakhand ನಿರಂತರ ಮಳೆ #Rain ಮತ್ತು ಭೂಕುಸಿತದಿಂದ  ಸಾವನ್ನಪ್ಪಿದವರ ಸಂಖ್ಯೆ 81ಕ್ಕೆ ಏರಿದೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಭೂ ಕುಸಿತ ಮತ್ತು ಮನೆ ಕುಸಿತದ ಅವಶೇಷಗಳಿಂದ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಈ ದುರಂತದ ನಡುವೆಯೇ ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿದೆ. ಹಾಗೆ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಬಹುತೇಕ ಮೃತದೇಹಗಳು ಪತ್ತೆಯಾಗಿವೆ. ಕಳೆದ 3 ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ. ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

Advertisement

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿ ಪ್ರಕಾರ, ಜೂನ್ 24 ಮುಂಗಾರು ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಒಟ್ಟು 214 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ. ಮತ್ತು 38 ಜನರು ನಾಪತ್ತೆಯಾಗಿದ್ದಾರೆ. ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಮ್ಮರ್ ಹಿಲ್ ಸೈಟ್‌ನಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕಾಂಗ್ರಾ ಜಿಲ್ಲೆಯ ಇಂದೋರಾ ಮತ್ತು ಫತೇಪುರ್ ಉಪವಿಭಾಗಗಳ ಪ್ರವಾಹ ಪೀಡಿತ ಪ್ರದೇಶಗಳಿಂದ 1,731 ಜನರನ್ನು ರಕ್ಷಿಸಲಾಗಿದೆ. ವಾಯುಪಡೆಯ ಹೆಲಿಕಾಪ್ಟರ್‌ಗಳು, ಸೇನಾ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ನೆರವಿನೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ನಡೆಯುತ್ತಿದೆ. ಹಿಮಾಚಲ ಪ್ರದೇಶವು ಈ ವರ್ಷ 54 ದಿನಗಳ ಮಾನ್ಸೂನ್‌ನಲ್ಲಿ ಈಗಾಗಲೇ 742 ಮಿಮೀ ಮಳೆಯನ್ನು ದಾಖಲಿಸಿದೆ. ಜೂನ್ 1 ರಿಂದ ಸೆಪ್ಟೆಂಬರ್ 30ರ ನಡುವೆ ಸರಾಸರಿ 730 ಮಿಮೀ ಮಳೆ ದಾಖಲಾಗಿದೆ. ಈ ಜುಲೈನಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಮಳೆಯು ಕಳೆದ 50 ವರ್ಷಗಳಲ್ಲಿ ತಿಂಗಳ ಎಲ್ಲಾ ದಾಖಲೆಗಳನ್ನು ಮುರಿದಿದೆ ಎಂದು ಶಿಮ್ಲಾ ಹವಾಮಾನ ಕೇಂದ್ರದ ನಿರ್ದೇಶಕ ಸುರೀಂದರ್ ಪಾಲ್ ತಿಳಿಸಿದ್ದಾರೆ.

Advertisement

ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ:ಪಾಂಗ್ ಮತ್ತು ಭಾಕ್ರಾ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ಬಳಿಕ ಹೋಶಿಯಾರ್‌ಪುರ, ಗುರುದಾಸ್‌ಪುರ ಮತ್ತು ರೂಪನಗರ ಜಿಲ್ಲೆಗಳ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕ್ರಮವಾಗಿ 1,677 ಅಡಿ ಮತ್ತು 1,398 ಅಡಿಗಳಲ್ಲಿದೆ ಎಂದು ತಿಳಿಸಿದರು.

Source: News Portals

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

13 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago