ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ.ಯೋಜನೆ

August 8, 2023
6:17 PM
ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ.ಯೋಜನೆಯ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಪರಿಸರ ಸಚಿವರು ಸೂಚಿಸಿದ್ದಾರೆ. ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಲಾಗಿದೆ.

ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋ ಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆಯೇ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.

ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.

ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ
April 21, 2026
7:21 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror