Advertisement
MIRROR FOCUS

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ.ಯೋಜನೆ

Share

ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯ ಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋ ಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆಯೇ ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.

ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು.

ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

12 minutes ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

28 minutes ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

37 minutes ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago