ಹವಾಮಾನದಲ್ಲಿ ಭಾರಿ ಬದಲಾವಣೆ | ಸಂಕಷ್ಟಕ್ಕೆ ಸಿಲುಕಲಿವೆ ಭಾರತದ 9 ರಾಜ್ಯಗಳು | ಇದು ಮಾನವ ಕುಲಕ್ಕೆ ಎಚ್ಚರಿಕೆ ಗಂಟೆ…! |

February 22, 2023
1:16 PM

ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯನ್ನು ನಾವು ಕಾಣುತ್ತಿದ್ದೇವೆ. ಈ ಬಗ್ಗೆ ಪ್ರಕೃತಿಯೇ ಎಚ್ಚರಿಸಿದರು ನಾವುಗಳು ಇನ್ನು ಎಚ್ಚೆತ್ತುಕೊಂಡಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈಗಾಗಲೇ ವಿಶ್ವದಲ್ಲಿ ಹಲವು ಸಮಸ್ಯೆಗಳು ಉಲ್ಬಣಿಸಿವೆ. ಅದರಲ್ಲಿ ಅಕಾಲಿಕ ಮಳೆ, ಭೂಕುಸಿತ ಸೇರಿದಂತೆ ಹಲವು ಸಮಸ್ಯೆಗಳು ಈಗಾಗಲೇ ಹೆಚ್ಚಾಗಿವೆ. ಆದರೆ, ಮುಂದಿನ ದಿನಗಳಲ್ಲಿ ಇದಕ್ಕಿಂತಲೂ ಭೀಕರವಾದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯ ಕರೆಗಂಟೆ ಬಂದಿದೆ.

ನಿರಂತರ ಹವಾಮಾನ ಬದಲಾವಣೆಯಿಂದಾಗಿ ವಿಶ್ವದ 50 ಪ್ರದೇಶಗಳಲ್ಲಿ ಸಮಸ್ಯೆ ಆಗಲಿದ್ದು, ದೇಶದ 9 ರಾಜ್ಯಗಳನ್ನೂ ಇದರಲ್ಲಿ ಗುರುತಿಸಲಾಗಿದೆ. ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಮಹಾರಾಷ್ಟ್ರ ಸೇರಿದಂತೆ ಭಾರತದ ಒಂಬತ್ತು ರಾಜ್ಯಗಳು ಹವಾಮಾನ ಬದಲಾವಣೆಯ ಅಪಾಯಗಳಿಂದಾಗಿ ನಿರ್ಮಿತ ಪರಿಸರಕ್ಕೆ ಹಾನಿಯಾಗುವ ಅಪಾಯವನ್ನು ಎದುರಿಸುತ್ತಿರುವ ವಿಶ್ವದ ಅಗ್ರ 50 ಪ್ರದೇಶಗಳಲ್ಲಿ ಸೇರಿದೆ.

ದೇಶದ ಬಿಹಾರ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಭಾರತದ ಒಂಬತ್ತು ರಾಜ್ಯಗಳು ಹವಾಮಾನ ಬದಲಾವಣೆಯ ಅಪಾಯಗಳಿಂದಾಗಿ ನಿರ್ಮಿತ ಪರಿಸರಕ್ಕೆ ಹಾನಿಯಾಗುವ ಅಪಾಯವನ್ನು ಎದುರಿಸುತ್ತಿರುವ ವಿಶ್ವದ ಅಗ್ರ 50 ಪ್ರದೇಶಗಳಲ್ಲಿ ಸೇರಿವೆ ಎಂದು ಹೊಸ ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಗ್ರಾಸ್ ಡೊಮೆಸ್ಟಿಕ್ ಕ್ಲೈಮೇಟ್ ರಿಸ್ಕ್” ಎಂಬ ಶೀರ್ಷಿಕೆಯ ವರದಿಯು 2050 ರಲ್ಲಿ ಪ್ರಪಂಚದಾದ್ಯಂತ 2,600 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ಭೌತಿಕ ಹವಾಮಾನ ಅಪಾಯವನ್ನು ಎದುರಿಸುತ್ತವೆ ಎಂದು ವರದಿ ಮಾಡಿದೆ. ವರದಿಯು ಆಸ್ಟ್ರೇಲಿಯಾ ಮೂಲದ ಕ್ರಾಸ್ ಡಿಪೆಂಡೆನ್ಸಿ ಇನಿಶಿಯೇಟಿವ್ ಅಥವಾ XDI ಎಂಬ ಸಂಸ್ಥೆ ಸಿದ್ಧಪಡಿಸಿದೆ.

ಇನ್ನು ವಿಶ್ವದಲ್ಲಿ ಪ್ರವಾಹ, ಕಾಡಿನ ಬೆಂಕಿ ಮತ್ತು ಸಮುದ್ರದ ನೀರಿನ ಮಟ್ಟ ಏರಿಕೆಯಂತಹ ಹವಾಮಾನ ವೈಪರೀತ್ಯಗಳಿಂದ ಕಟ್ಟಡಗಳು ಮತ್ತು ಆಸ್ತಿಗಳಿಗೆ ಹಾನಿಯುಂಟಾಗಲಿದೆ. ವಿಶ್ಲೇಷಣೆಯ ಪ್ರಕಾರ, 2050ರಲ್ಲಿ ಅಗ್ರ 50 ಅಪಾಯದಲ್ಲಿರುವ ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ಶೇಕಡಾ 80ರಷ್ಟು ಚೀನಾ, ಅಮೆರಿಕ ಮತ್ತು ಭಾರತದಲ್ಲಿವೆ ಎಂಬ ಆಂಶ ಆತಂಕಕ್ಕೆ ಕಾರಣವಾಗಿದೆ.

ಚೀನಾದ ನಂತರ, ಭಾರತವು ಅಗ್ರ 50 ರಲ್ಲಿ ಅತಿ ಹೆಚ್ಚು ಸಂಕಷ್ಟದ ರಾಜ್ಯಗಳನ್ನು ಹೊಂದಿದೆ. ಈ ವರದಿಯ ಅನ್ವಯ ಬಿಹಾರ (22 ನೇ ಸ್ಥಾನ), ಉತ್ತರ ಪ್ರದೇಶ (25ನೇ ಸ್ಥಾನ), ಅಸ್ಸಾಂ (28ನೇ ಸ್ಥಾನ),ರಾಜಸ್ಥಾನ (32ನೇ ಸ್ಥಾನ ), ತಮಿಳುನಾಡು (36ನೇ ಸ್ಥಾನ), ಮಹಾರಾಷ್ಟ್ರ ( 38ನೇ ಸ್ಥಾನ), ಗುಜರಾತ್ (48ನೇ ಸ್ಥಾನ), ಪಂಜಾಬ್ (50ನೇ ಸ್ಥಾನ) ಮತ್ತು ಕೇರಳ (52ನೇ ಸ್ಥಾನ)ದಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror