Advertisement
ಸುದ್ದಿಗಳು

ಹವಾಮಾನದಲ್ಲಿ ಭಾರಿ ಬದಲಾವಣೆ | ಸಂಕಷ್ಟಕ್ಕೆ ಸಿಲುಕಲಿವೆ ಭಾರತದ 9 ರಾಜ್ಯಗಳು | ಇದು ಮಾನವ ಕುಲಕ್ಕೆ ಎಚ್ಚರಿಕೆ ಗಂಟೆ…! |

Share

ದಿನದಿಂದ ದಿನಕ್ಕೆ ಹವಾಮಾನದಲ್ಲಿ ಭಾರಿ ಬದಲಾವಣೆಯನ್ನು ನಾವು ಕಾಣುತ್ತಿದ್ದೇವೆ. ಈ ಬಗ್ಗೆ ಪ್ರಕೃತಿಯೇ ಎಚ್ಚರಿಸಿದರು ನಾವುಗಳು ಇನ್ನು ಎಚ್ಚೆತ್ತುಕೊಂಡಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈಗಾಗಲೇ ವಿಶ್ವದಲ್ಲಿ ಹಲವು ಸಮಸ್ಯೆಗಳು ಉಲ್ಬಣಿಸಿವೆ. ಅದರಲ್ಲಿ ಅಕಾಲಿಕ ಮಳೆ, ಭೂಕುಸಿತ ಸೇರಿದಂತೆ ಹಲವು ಸಮಸ್ಯೆಗಳು ಈಗಾಗಲೇ ಹೆಚ್ಚಾಗಿವೆ. ಆದರೆ, ಮುಂದಿನ ದಿನಗಳಲ್ಲಿ ಇದಕ್ಕಿಂತಲೂ ಭೀಕರವಾದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯ ಕರೆಗಂಟೆ ಬಂದಿದೆ.

ನಿರಂತರ ಹವಾಮಾನ ಬದಲಾವಣೆಯಿಂದಾಗಿ ವಿಶ್ವದ 50 ಪ್ರದೇಶಗಳಲ್ಲಿ ಸಮಸ್ಯೆ ಆಗಲಿದ್ದು, ದೇಶದ 9 ರಾಜ್ಯಗಳನ್ನೂ ಇದರಲ್ಲಿ ಗುರುತಿಸಲಾಗಿದೆ. ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಮಹಾರಾಷ್ಟ್ರ ಸೇರಿದಂತೆ ಭಾರತದ ಒಂಬತ್ತು ರಾಜ್ಯಗಳು ಹವಾಮಾನ ಬದಲಾವಣೆಯ ಅಪಾಯಗಳಿಂದಾಗಿ ನಿರ್ಮಿತ ಪರಿಸರಕ್ಕೆ ಹಾನಿಯಾಗುವ ಅಪಾಯವನ್ನು ಎದುರಿಸುತ್ತಿರುವ ವಿಶ್ವದ ಅಗ್ರ 50 ಪ್ರದೇಶಗಳಲ್ಲಿ ಸೇರಿದೆ.

ದೇಶದ ಬಿಹಾರ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಭಾರತದ ಒಂಬತ್ತು ರಾಜ್ಯಗಳು ಹವಾಮಾನ ಬದಲಾವಣೆಯ ಅಪಾಯಗಳಿಂದಾಗಿ ನಿರ್ಮಿತ ಪರಿಸರಕ್ಕೆ ಹಾನಿಯಾಗುವ ಅಪಾಯವನ್ನು ಎದುರಿಸುತ್ತಿರುವ ವಿಶ್ವದ ಅಗ್ರ 50 ಪ್ರದೇಶಗಳಲ್ಲಿ ಸೇರಿವೆ ಎಂದು ಹೊಸ ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಗ್ರಾಸ್ ಡೊಮೆಸ್ಟಿಕ್ ಕ್ಲೈಮೇಟ್ ರಿಸ್ಕ್” ಎಂಬ ಶೀರ್ಷಿಕೆಯ ವರದಿಯು 2050 ರಲ್ಲಿ ಪ್ರಪಂಚದಾದ್ಯಂತ 2,600 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ಭೌತಿಕ ಹವಾಮಾನ ಅಪಾಯವನ್ನು ಎದುರಿಸುತ್ತವೆ ಎಂದು ವರದಿ ಮಾಡಿದೆ. ವರದಿಯು ಆಸ್ಟ್ರೇಲಿಯಾ ಮೂಲದ ಕ್ರಾಸ್ ಡಿಪೆಂಡೆನ್ಸಿ ಇನಿಶಿಯೇಟಿವ್ ಅಥವಾ XDI ಎಂಬ ಸಂಸ್ಥೆ ಸಿದ್ಧಪಡಿಸಿದೆ.

ಇನ್ನು ವಿಶ್ವದಲ್ಲಿ ಪ್ರವಾಹ, ಕಾಡಿನ ಬೆಂಕಿ ಮತ್ತು ಸಮುದ್ರದ ನೀರಿನ ಮಟ್ಟ ಏರಿಕೆಯಂತಹ ಹವಾಮಾನ ವೈಪರೀತ್ಯಗಳಿಂದ ಕಟ್ಟಡಗಳು ಮತ್ತು ಆಸ್ತಿಗಳಿಗೆ ಹಾನಿಯುಂಟಾಗಲಿದೆ. ವಿಶ್ಲೇಷಣೆಯ ಪ್ರಕಾರ, 2050ರಲ್ಲಿ ಅಗ್ರ 50 ಅಪಾಯದಲ್ಲಿರುವ ರಾಜ್ಯಗಳು ಮತ್ತು ಪ್ರಾಂತ್ಯಗಳಲ್ಲಿ ಶೇಕಡಾ 80ರಷ್ಟು ಚೀನಾ, ಅಮೆರಿಕ ಮತ್ತು ಭಾರತದಲ್ಲಿವೆ ಎಂಬ ಆಂಶ ಆತಂಕಕ್ಕೆ ಕಾರಣವಾಗಿದೆ.

ಚೀನಾದ ನಂತರ, ಭಾರತವು ಅಗ್ರ 50 ರಲ್ಲಿ ಅತಿ ಹೆಚ್ಚು ಸಂಕಷ್ಟದ ರಾಜ್ಯಗಳನ್ನು ಹೊಂದಿದೆ. ಈ ವರದಿಯ ಅನ್ವಯ ಬಿಹಾರ (22 ನೇ ಸ್ಥಾನ), ಉತ್ತರ ಪ್ರದೇಶ (25ನೇ ಸ್ಥಾನ), ಅಸ್ಸಾಂ (28ನೇ ಸ್ಥಾನ),ರಾಜಸ್ಥಾನ (32ನೇ ಸ್ಥಾನ ), ತಮಿಳುನಾಡು (36ನೇ ಸ್ಥಾನ), ಮಹಾರಾಷ್ಟ್ರ ( 38ನೇ ಸ್ಥಾನ), ಗುಜರಾತ್ (48ನೇ ಸ್ಥಾನ), ಪಂಜಾಬ್ (50ನೇ ಸ್ಥಾನ) ಮತ್ತು ಕೇರಳ (52ನೇ ಸ್ಥಾನ)ದಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

3 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

4 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

4 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

15 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

19 hours ago