Advertisement
MIRROR FOCUS

ಇಸ್ರೇಲ್‌ನಲ್ಲಿ 90 ಸಾವಿರ ಪ್ಯಾಲೆಸ್ತೇನಿಯ ಕಾರ್ಮಿಕರು ಔಟ್‌ | 1 ಲಕ್ಷ ಭಾರತೀಯ ಕಾರ್ಮಿಕರು ಇನ್‌ | ಭಾರತದ ಜೊತೆ ಇಸ್ರೇಲ್‌ ಒಪ್ಪಂದಕ್ಕೆ ಸಹಿ |

Share

ಭಾರತದಲ್ಲಿ ನಿರುದ್ಯೋಗ(Unemployment) ತಾಂಡವವಾಡುತ್ತಿರುವ ಸಂದರ್ಭದಲ್ಲಿ ಭಾರತೀಯ ಪ್ರಜೆಗಳಿಗೆ ವಿದೇಶ(Foreign)ದಲ್ಲಿ ಕೆಲಸ(Job) ಕೊಡ್ತೀವಿ ಅಂದ್ರೆ ಇದಕ್ಕಿಂತ ಖುಷಿಯ ವಿಷಯ ಇನ್ನೊಂದಿಲ್ಲ. ಆದರೆ ಇಲ್ಲಿ ಖುಷಿ ಪಡಬೇಕೋ.. ಇಲ್ಲ ನಿರಾಶ್ರಿತರ ಕೆಲಸವನ್ನು ನಾವು ಕಿತ್ತುಕೊಂಡು ಅವರ ಬೀದಿಪಾಲಿಗೆ ನಾವು ಪಾಲುದಾರರಾಗುತ್ತಿದ್ದೇವಾ ಎಂಬ ಯೋಚನೆ ಇದೆ. ಪ್ಯಾಲೆಸ್ತೇನ್‌ (Palestine) ಕಾರ್ಮಿಕರ ಬದಲು ಭಾರತದ (India) ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ (Israel) ಈಗ ಮುಂದಾಗಿದೆ. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್‌ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ (Construction) ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ.

ಇದೀಗ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಬೇಡಿಕೆಗೆ ಅನುಮತಿ ನೀಡಲು ಇಸ್ರೇಲ್ ಸರ್ಕಾರದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಇಡೀ ವಲಯವನ್ನು ನಡೆಸಲು ಮತ್ತು ಅದನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವಂತೆ ಭಾರತದಿಂದ 50 ಸಾವಿರದಿಂದ 1 ಲಕ್ಷ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ನಾವು ಆಶಿಸುತ್ತೇವೆ ಎಂದು ವೆಸ್ಟ್ ಬ್ಯಾಂಕ್‌ನ ವಾಯ್ಸ್ ಆಫ್ ಅಮೇರಿಕಾ ವರದಿಯು ಇಸ್ರೇಲ್ ಬಿಲ್ಡರ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಹೈಮ್ ಫೀಗ್ಲಿನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ವರದಿಯ ಪ್ರಕಾರ, ಇಸ್ರೇಲಿ ನಿರ್ಮಾಣ ಉದ್ಯಮದಲ್ಲಿ ಉದ್ಯೋಗಿಯಾಗಿರುವ ಕಾರ್ಮಿಕರ ಪೈಕಿ ಪ್ಯಾಲೆಸ್ತೇನಿಯನ್ನರು ಸರಿಸುಮಾರು 25 ಪ್ರತಿಶತವನ್ನು ಹೊಂದಿದ್ದಾರೆ. ನಾವು ಈಗ ಯುದ್ಧದಲ್ಲಿದ್ದೇವೆ. ನಮ್ಮ ಮಾನವ ಸಂಪನ್ಮೂಲದ ಸುಮಾರು 25 ಪ್ರತಿಶತದಷ್ಟು ಇರುವ ಪ್ಯಾಲೆಸ್ತೇನ್‌ ಕೆಲಸಗಾರರು ಬರುತ್ತಿಲ್ಲ. ಇವರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅನುಮತಿ ಇಲ್ಲ ಎಂದು ಫೀಗ್ಲಿನ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಇಸ್ರೇಲ್ ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಸ್ರೇಲ್‌ 42 ಸಾವಿರ ಭಾರತೀಯರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತದೆ. ನಿರ್ಮಾಣ ಮತ್ತು ನರ್ಸಿಂಗ್ ಕ್ಷೇತ್ರಗಳಲ್ಲಿ 42 ಸಾವಿರ ಭಾರತೀಯ ಕಾರ್ಮಿಕರಿಗೆ ಉದ್ಯೋಗಕ್ಕೆ  ಅನುಮತಿ ನೀಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ತಮ್ಮ ದೇಶದ ಮೇಲಿನ ದಾಳಿ ದೇಶದಲ್ಲಿ ಉದ್ಯೋಗದಲ್ಲಿದ್ದ ಪ್ಯಾಲೆಸ್ತೀನ್‌ ಕಾರ್ಮಿಕರು ಕಾರಣ. ಅವರು ನಮ್ಮ ದೇಶದ ಬಗ್ಗೆ ಹಮಾಸ್‌ ಉಗ್ರರಿಗೆ ಮಾಹಿತಿ ನೀಡಿದ್ದರು ಎಂಬ ಕಾರಣ ನೀಡಿ ಇಸ್ರೇಲ್‌ ಕಳೆದ ವಾರ ಗಾಜಾಗೆ ಗಡಿಪಾರು ಮಾಡಿದೆ.

ಪ್ಯಾಲೆಸ್ತೇನ್‌ ಜೊತೆಗಿನ ಸಂಬಂಧ ಸುಧಾರಣೆಯಾಗುತ್ತಿದ್ದಂತೆ ಇಸ್ರೇಲ್‌ ಪ್ಯಾಲೆಸ್ತೇನ್‌ ಪ್ರಜೆಗಳಿಗೆ  ಮಾನವೀಯ ದೃಷ್ಟಿಯಿಂದ ಕೆಲ ವರ್ಷಗಳಿಂದ ದೇಶದಲ್ಲಿ ಉದ್ಯೋಗ ನೀಡಿತ್ತು. ಉದ್ಯೋಗ ಪಡೆದ ಪ್ರಜೆಗಳು ಹಮಾಸ್‌ ಉಗ್ರರ ಜೊತೆ ಕೈ ಜೋಡಿಸಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಇಸ್ರೇಲ್‌ ಗಡಿಪಾರು ಮಾಡಿದೆ. ಇಸ್ರೇಲ್‌ನ ಬೇಡಿಕೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

Israel now offers to hire Indian workers instead of Palestinian workers. 90,000 Palestinian workers have had their work permits revoked since the war with Hamas. Now the Israeli construction industry has reportedly asked the government to allow companies to hire 1 lakh Indian workers instead of Palestinian nationals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

17 minutes ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

23 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago