Advertisement
MIRROR FOCUS

ಇಸ್ರೇಲ್‌ನಲ್ಲಿ 90 ಸಾವಿರ ಪ್ಯಾಲೆಸ್ತೇನಿಯ ಕಾರ್ಮಿಕರು ಔಟ್‌ | 1 ಲಕ್ಷ ಭಾರತೀಯ ಕಾರ್ಮಿಕರು ಇನ್‌ | ಭಾರತದ ಜೊತೆ ಇಸ್ರೇಲ್‌ ಒಪ್ಪಂದಕ್ಕೆ ಸಹಿ |

Share

ಭಾರತದಲ್ಲಿ ನಿರುದ್ಯೋಗ(Unemployment) ತಾಂಡವವಾಡುತ್ತಿರುವ ಸಂದರ್ಭದಲ್ಲಿ ಭಾರತೀಯ ಪ್ರಜೆಗಳಿಗೆ ವಿದೇಶ(Foreign)ದಲ್ಲಿ ಕೆಲಸ(Job) ಕೊಡ್ತೀವಿ ಅಂದ್ರೆ ಇದಕ್ಕಿಂತ ಖುಷಿಯ ವಿಷಯ ಇನ್ನೊಂದಿಲ್ಲ. ಆದರೆ ಇಲ್ಲಿ ಖುಷಿ ಪಡಬೇಕೋ.. ಇಲ್ಲ ನಿರಾಶ್ರಿತರ ಕೆಲಸವನ್ನು ನಾವು ಕಿತ್ತುಕೊಂಡು ಅವರ ಬೀದಿಪಾಲಿಗೆ ನಾವು ಪಾಲುದಾರರಾಗುತ್ತಿದ್ದೇವಾ ಎಂಬ ಯೋಚನೆ ಇದೆ. ಪ್ಯಾಲೆಸ್ತೇನ್‌ (Palestine) ಕಾರ್ಮಿಕರ ಬದಲು ಭಾರತದ (India) ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ (Israel) ಈಗ ಮುಂದಾಗಿದೆ. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್‌ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ (Construction) ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ.

ಇದೀಗ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಬೇಡಿಕೆಗೆ ಅನುಮತಿ ನೀಡಲು ಇಸ್ರೇಲ್ ಸರ್ಕಾರದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಇಡೀ ವಲಯವನ್ನು ನಡೆಸಲು ಮತ್ತು ಅದನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವಂತೆ ಭಾರತದಿಂದ 50 ಸಾವಿರದಿಂದ 1 ಲಕ್ಷ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ನಾವು ಆಶಿಸುತ್ತೇವೆ ಎಂದು ವೆಸ್ಟ್ ಬ್ಯಾಂಕ್‌ನ ವಾಯ್ಸ್ ಆಫ್ ಅಮೇರಿಕಾ ವರದಿಯು ಇಸ್ರೇಲ್ ಬಿಲ್ಡರ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಹೈಮ್ ಫೀಗ್ಲಿನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ವರದಿಯ ಪ್ರಕಾರ, ಇಸ್ರೇಲಿ ನಿರ್ಮಾಣ ಉದ್ಯಮದಲ್ಲಿ ಉದ್ಯೋಗಿಯಾಗಿರುವ ಕಾರ್ಮಿಕರ ಪೈಕಿ ಪ್ಯಾಲೆಸ್ತೇನಿಯನ್ನರು ಸರಿಸುಮಾರು 25 ಪ್ರತಿಶತವನ್ನು ಹೊಂದಿದ್ದಾರೆ. ನಾವು ಈಗ ಯುದ್ಧದಲ್ಲಿದ್ದೇವೆ. ನಮ್ಮ ಮಾನವ ಸಂಪನ್ಮೂಲದ ಸುಮಾರು 25 ಪ್ರತಿಶತದಷ್ಟು ಇರುವ ಪ್ಯಾಲೆಸ್ತೇನ್‌ ಕೆಲಸಗಾರರು ಬರುತ್ತಿಲ್ಲ. ಇವರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅನುಮತಿ ಇಲ್ಲ ಎಂದು ಫೀಗ್ಲಿನ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಇಸ್ರೇಲ್ ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಸ್ರೇಲ್‌ 42 ಸಾವಿರ ಭಾರತೀಯರಿಗೆ ಇಸ್ರೇಲ್‌ನಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತದೆ. ನಿರ್ಮಾಣ ಮತ್ತು ನರ್ಸಿಂಗ್ ಕ್ಷೇತ್ರಗಳಲ್ಲಿ 42 ಸಾವಿರ ಭಾರತೀಯ ಕಾರ್ಮಿಕರಿಗೆ ಉದ್ಯೋಗಕ್ಕೆ  ಅನುಮತಿ ನೀಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ತಮ್ಮ ದೇಶದ ಮೇಲಿನ ದಾಳಿ ದೇಶದಲ್ಲಿ ಉದ್ಯೋಗದಲ್ಲಿದ್ದ ಪ್ಯಾಲೆಸ್ತೀನ್‌ ಕಾರ್ಮಿಕರು ಕಾರಣ. ಅವರು ನಮ್ಮ ದೇಶದ ಬಗ್ಗೆ ಹಮಾಸ್‌ ಉಗ್ರರಿಗೆ ಮಾಹಿತಿ ನೀಡಿದ್ದರು ಎಂಬ ಕಾರಣ ನೀಡಿ ಇಸ್ರೇಲ್‌ ಕಳೆದ ವಾರ ಗಾಜಾಗೆ ಗಡಿಪಾರು ಮಾಡಿದೆ.

ಪ್ಯಾಲೆಸ್ತೇನ್‌ ಜೊತೆಗಿನ ಸಂಬಂಧ ಸುಧಾರಣೆಯಾಗುತ್ತಿದ್ದಂತೆ ಇಸ್ರೇಲ್‌ ಪ್ಯಾಲೆಸ್ತೇನ್‌ ಪ್ರಜೆಗಳಿಗೆ  ಮಾನವೀಯ ದೃಷ್ಟಿಯಿಂದ ಕೆಲ ವರ್ಷಗಳಿಂದ ದೇಶದಲ್ಲಿ ಉದ್ಯೋಗ ನೀಡಿತ್ತು. ಉದ್ಯೋಗ ಪಡೆದ ಪ್ರಜೆಗಳು ಹಮಾಸ್‌ ಉಗ್ರರ ಜೊತೆ ಕೈ ಜೋಡಿಸಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಇಸ್ರೇಲ್‌ ಗಡಿಪಾರು ಮಾಡಿದೆ. ಇಸ್ರೇಲ್‌ನ ಬೇಡಿಕೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

Israel now offers to hire Indian workers instead of Palestinian workers. 90,000 Palestinian workers have had their work permits revoked since the war with Hamas. Now the Israeli construction industry has reportedly asked the government to allow companies to hire 1 lakh Indian workers instead of Palestinian nationals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

16 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

20 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago