ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…