ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…