ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…