ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…