ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…