ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ನಂದಿಸುವ ಲ್ಯಾಡರ್ ವಾಹನ ಬೆಂಗಳೂರಿಗೆ ಬಂದಿದೆ.
ಈ ವಾಹನದ ಮೂಲಕ 90 ಮೀಟರ್ ಎತ್ತರದವರೆಗಿನ ಕಟ್ಟಡಗಳಲ್ಲಿ ಬೆಂಕಿ ನಂದಿಸಬಹುದಾಗಿದೆ. ಈ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ಅನ್ನು ರಾಜ್ಯ ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಮಾಡಲಿದ್ದಾರೆ.
ರಾಜ್ಯ ಸರ್ಕಾರ ಸುಮಾರು 30 ಕೋಟಿ ವೆಚ್ಚದಲ್ಲಿ ಈ ವಾಹನವನ್ನು ಖರೀದಿಸಿದ್ದು, ಈ ವಾಹನವನ್ನು ಫಿನ್ಲೆಂಡ್ ದೇಶದಿಂದ ತರಿಸಲಾಗಿದೆ.
ನಾಳೆ ಈ ವಾಹನವನ್ನು ಸರ್ಕಾರ ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಲಿದೆ. ಇದಕ್ಕೂ ಮೊದಲು ಮುಂಬೈ ನಗರದಲ್ಲಿ ಈ ವಾಹನವನ್ನು ಬಳಸಲಾಗುತ್ತಿತ್ತು, ಇದೀಗ ರಾಜ್ಯಕ್ಕೆ ಕಾಲಿಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ಗಗನಚುಂಬಿ ಕಟ್ಟಡಗಳ ಬೆಂಕಿ ನಂದಿಸಲು ಈ ವಾಹನವನ್ನು ಬಳಸಲಾಗುತ್ತದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…