Advertisement
ಸುದ್ದಿಗಳು

“916” ಪ್ರಾಮಾಣಿಕತೆಗೆ “ಚಿನ್ನದ” ಉಡುಗೊರೆ…!

Share

ಪುತ್ತೂರು: ಪರಿಶುದ್ಧವಾದ ಪ್ರಾಮಾಣಿಕತೆಗೆ ಚಿನ್ನದ ನಾಣ್ಯಗಳ ಉಡುಗೊರೆ…!. ಇದು ಸಿಕ್ಕಿದ್ದು ಹೋಟೆಲ್ ಸಿಬ್ಬಂದಿಗೆ. ಈ ಕೊಡುಗೆ ನೀಡಿದ್ದು ಪುತ್ತೂರಿನ ಮುಳಿಯ ಜ್ಯವೆಲ್ಸ್ ನ ಕೇಶವ ಪ್ರಸಾದ್ ಮುಳಿಯ. ಈ ಪ್ರಾಮಾಣಿಕತೆ ಎಲ್ಲರಿಗೂ ಮಾದರಿಯೂ ಹೌದು.

ಪ್ರಾಮಾಣಿಕತೆಗೆ ಶುದ್ಧ-ಪರಿಶುದ್ಧ ಅಂತ ಇಲ್ಲ ನಿಜ. ಆದರೆ ಇದು ಪರಿಶುದ್ಧ ಎನ್ನುವುದು  ಏಕೆಂದರೆ ಮೂರೂವರೆ ಪವನ್ ಚಿನ್ನದ ಸಂಗತಿ ಇದು. ಕಾರ್ಯಕ್ರಮವೊಂದರಲ್ಲಿ ಕೇಶವ ಪ್ರಸಾದ್ ಮುಳಿಯ  ಚಿನ್ನದ ಬ್ರಾಸ್ ಲೆಟ್ ಕಳೆದುಹೋಗಿತ್ತು. ಅದು ಪುತ್ತೂರಿನ ಹೋಟೆಲ್ ಹರಿಪ್ರಸಾದ್‍ ನ  ನೌಕರಿಯಲ್ಲಿರುವ ಸತೀಶ್ ಮತ್ತು ರಾಮಣ್ಣರವರಿಗೆ ಸಿಕ್ಕಿತು. ಅವರು ಆ ಚಿನ್ನವನ್ನು ಕಾರ್ಯಕ್ರಮ ನಡೆಸಿದ್ದ  ಮನೆಯವರಿಗೆ ಒಪ್ಪಿಸಿದರು. ನಂತರ ಆ ಮನೆಯವರ ಮೂಲಕ  ಬ್ರಾಸ್ ಲೆಟ್ ಕೇಶವ ಪ್ರಸಾದ್ ಮುಳಿಯ ಅವರ ಕೈಸೇರಿತು. ಈ “ಚಿನ್ನದ” ಕತೆ ಹೀಗಿದೆ…

ಆ ಭಾನುವಾರ ದಿನಪೂರ್ತಿ ಕಾರ್ಯಕ್ರಮಗಳಲ್ಲಿ  ಭಾಗವಹಿಸಿ ಮುಳಿಯ ಜ್ಯವೆಲ್ಸ್ ನ ಕೇಶವ ಪ್ರಸಾದ್ ಮುಳಿಯ  ಮನೆಗೆ ತಲಪುವಾಗ ರಾತ್ರಿಯಾಗಿತ್ತು. ಮರುದಿನ ಅರ್ಧ ತೋಳಿನ ಅಂಗಿ ಹಾಕಿದಾಗಲೇ ಬ್ರಾಸ್‍ಲೆಟ್ ಕಳೆದುಹೋಗಿರುವ ಸಂಗತಿ ಬೆಳಕಿಗೆ ಬಂತು. ಯಾವಾಗ ಕಳೆದುಕೊಂಡದ್ದು ಎಂದೇ ತಿಳಿದಿಲ್ಲ. ಸಿ.ಸಿ ಕೆಮರಾ, ಹೋದ ಸಮಾರಂಭಗಳೆಲ್ಲೆಲ್ಲಾ ವಿಚಾರಿಸಿದರೂ ಏನೂ ಸುಳಿವು ಸಿಗಲಿಲ್ಲ. ವಿಚಾರಿಸಲು ಕೊನೆಯದಾಗಿ ಬಾಕಿಯಾದ್ದು ವಿಟ್ಲದ ಡಾ. ರಾಮ್‍ಮೋಹನ ಅವರ ಮಗ ಡಾ.ಅರವಿಂದ್ ಅವರ ಬೆನಕದ ಗೃಹಪ್ರವೇಶದ ಕಾರ್ಯಕ್ರಮ. ಅಂತೂ ತನ್ನ ಗೆಳೆಯನಾದ ಅರವಿಂದ ಅವರಿಗೆ ಕೇಶವ ಪ್ರಸಾದ್ ಮುಳಿಯ ಅವರು ಫೋನ್ ಮಾಡಿದರು. ತಕ್ಷಣವೇ ತಮಗೆ ಲಭ್ಯವಾಗಿರುವ ಚಿನ್ನದ ಸರಪಳಿಯ ಫೋಟೊ ವ್ಯಾಟ್ಸಪ್ ಮೂಲಕ ಕಳುಹಿಸಿದಾಗ ಖಚಿತವಾಯಿತು.

ಬಳಿಕ ವಿಚಾರಿಸಿದಾಗ ಊಟ ಮಾಡುತ್ತಿದ್ದ ಜಾಗದಲ್ಲಿ ಆ ದಿನದ ಕ್ಯಾಟರಿಂಗ್ ವ್ಯವಸ್ಥೆ ವಹಿಸಿಕೊಂಡ ಹೋಟೆಲ್  ಹರಿಪ್ರಸಾದ್‍ ನಲ್ಲಿ  ನೌಕರಿಯಲ್ಲಿರುವ ಸತೀಶ್ ಮತ್ತು ರಾಮಣ್ಣ ಅವರಿಗೆ ಸಿಕ್ಕಿತು ಅವರು ನಮಗೆ ಹಸ್ತಾಂತರಿಸಿದರು ಎಂದರು. ಬಡಿಸುವ ಕೌಂಟರ್ ಪಕ್ಕ ಹೊಳೆಯತ್ತಿದೆಯಲ್ಲಾ ಎಂದು ರಾಮಣ್ಣ  ಅವರಿಗೆ ಅನಿಸಿತು. ಸತೀಶ್ ಅವರು ಅದನ್ನು ಕೈಯಿಂದ ಎತ್ತಿದಾಗ ಅದು ಬ್ರಾಸ್‍ಲೆಟ್ ಎಂದು ತಿಳಿಯಿತು ಎಂದು ತಿಳಿಸಿದರು. ಇವರ ಪ್ರಾಮಾಣಿಕತೆಗೆ ತುಂಬು ಹೃದಯದ ಧನ್ಯವಾದ ಹೇಳಲಾಯಿತು. ಈಗ ಉಡುಗೊರೆಯಾಗಿ ಚಿನ್ನದ ನಾಣ್ಯಗಳನ್ನು ನೀಡಿ ಗೌರವಿಸಲಾಯಿತು.

( ನಿರೂಪಣೆ : ಕೃಷ್ಣವೇಣಿ ಪ್ರಸಾದ್ ಮುಳಿಯ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

23 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago