“916” ಪ್ರಾಮಾಣಿಕತೆಗೆ “ಚಿನ್ನದ” ಉಡುಗೊರೆ…!

August 30, 2019
7:38 PM

ಪುತ್ತೂರು: ಪರಿಶುದ್ಧವಾದ ಪ್ರಾಮಾಣಿಕತೆಗೆ ಚಿನ್ನದ ನಾಣ್ಯಗಳ ಉಡುಗೊರೆ…!. ಇದು ಸಿಕ್ಕಿದ್ದು ಹೋಟೆಲ್ ಸಿಬ್ಬಂದಿಗೆ. ಈ ಕೊಡುಗೆ ನೀಡಿದ್ದು ಪುತ್ತೂರಿನ ಮುಳಿಯ ಜ್ಯವೆಲ್ಸ್ ನ ಕೇಶವ ಪ್ರಸಾದ್ ಮುಳಿಯ. ಈ ಪ್ರಾಮಾಣಿಕತೆ ಎಲ್ಲರಿಗೂ ಮಾದರಿಯೂ ಹೌದು.

Advertisement
Advertisement

ಪ್ರಾಮಾಣಿಕತೆಗೆ ಶುದ್ಧ-ಪರಿಶುದ್ಧ ಅಂತ ಇಲ್ಲ ನಿಜ. ಆದರೆ ಇದು ಪರಿಶುದ್ಧ ಎನ್ನುವುದು  ಏಕೆಂದರೆ ಮೂರೂವರೆ ಪವನ್ ಚಿನ್ನದ ಸಂಗತಿ ಇದು. ಕಾರ್ಯಕ್ರಮವೊಂದರಲ್ಲಿ ಕೇಶವ ಪ್ರಸಾದ್ ಮುಳಿಯ  ಚಿನ್ನದ ಬ್ರಾಸ್ ಲೆಟ್ ಕಳೆದುಹೋಗಿತ್ತು. ಅದು ಪುತ್ತೂರಿನ ಹೋಟೆಲ್ ಹರಿಪ್ರಸಾದ್‍ ನ  ನೌಕರಿಯಲ್ಲಿರುವ ಸತೀಶ್ ಮತ್ತು ರಾಮಣ್ಣರವರಿಗೆ ಸಿಕ್ಕಿತು. ಅವರು ಆ ಚಿನ್ನವನ್ನು ಕಾರ್ಯಕ್ರಮ ನಡೆಸಿದ್ದ  ಮನೆಯವರಿಗೆ ಒಪ್ಪಿಸಿದರು. ನಂತರ ಆ ಮನೆಯವರ ಮೂಲಕ  ಬ್ರಾಸ್ ಲೆಟ್ ಕೇಶವ ಪ್ರಸಾದ್ ಮುಳಿಯ ಅವರ ಕೈಸೇರಿತು. ಈ “ಚಿನ್ನದ” ಕತೆ ಹೀಗಿದೆ…

ಆ ಭಾನುವಾರ ದಿನಪೂರ್ತಿ ಕಾರ್ಯಕ್ರಮಗಳಲ್ಲಿ  ಭಾಗವಹಿಸಿ ಮುಳಿಯ ಜ್ಯವೆಲ್ಸ್ ನ ಕೇಶವ ಪ್ರಸಾದ್ ಮುಳಿಯ  ಮನೆಗೆ ತಲಪುವಾಗ ರಾತ್ರಿಯಾಗಿತ್ತು. ಮರುದಿನ ಅರ್ಧ ತೋಳಿನ ಅಂಗಿ ಹಾಕಿದಾಗಲೇ ಬ್ರಾಸ್‍ಲೆಟ್ ಕಳೆದುಹೋಗಿರುವ ಸಂಗತಿ ಬೆಳಕಿಗೆ ಬಂತು. ಯಾವಾಗ ಕಳೆದುಕೊಂಡದ್ದು ಎಂದೇ ತಿಳಿದಿಲ್ಲ. ಸಿ.ಸಿ ಕೆಮರಾ, ಹೋದ ಸಮಾರಂಭಗಳೆಲ್ಲೆಲ್ಲಾ ವಿಚಾರಿಸಿದರೂ ಏನೂ ಸುಳಿವು ಸಿಗಲಿಲ್ಲ. ವಿಚಾರಿಸಲು ಕೊನೆಯದಾಗಿ ಬಾಕಿಯಾದ್ದು ವಿಟ್ಲದ ಡಾ. ರಾಮ್‍ಮೋಹನ ಅವರ ಮಗ ಡಾ.ಅರವಿಂದ್ ಅವರ ಬೆನಕದ ಗೃಹಪ್ರವೇಶದ ಕಾರ್ಯಕ್ರಮ. ಅಂತೂ ತನ್ನ ಗೆಳೆಯನಾದ ಅರವಿಂದ ಅವರಿಗೆ ಕೇಶವ ಪ್ರಸಾದ್ ಮುಳಿಯ ಅವರು ಫೋನ್ ಮಾಡಿದರು. ತಕ್ಷಣವೇ ತಮಗೆ ಲಭ್ಯವಾಗಿರುವ ಚಿನ್ನದ ಸರಪಳಿಯ ಫೋಟೊ ವ್ಯಾಟ್ಸಪ್ ಮೂಲಕ ಕಳುಹಿಸಿದಾಗ ಖಚಿತವಾಯಿತು.

ಬಳಿಕ ವಿಚಾರಿಸಿದಾಗ ಊಟ ಮಾಡುತ್ತಿದ್ದ ಜಾಗದಲ್ಲಿ ಆ ದಿನದ ಕ್ಯಾಟರಿಂಗ್ ವ್ಯವಸ್ಥೆ ವಹಿಸಿಕೊಂಡ ಹೋಟೆಲ್  ಹರಿಪ್ರಸಾದ್‍ ನಲ್ಲಿ  ನೌಕರಿಯಲ್ಲಿರುವ ಸತೀಶ್ ಮತ್ತು ರಾಮಣ್ಣ ಅವರಿಗೆ ಸಿಕ್ಕಿತು ಅವರು ನಮಗೆ ಹಸ್ತಾಂತರಿಸಿದರು ಎಂದರು. ಬಡಿಸುವ ಕೌಂಟರ್ ಪಕ್ಕ ಹೊಳೆಯತ್ತಿದೆಯಲ್ಲಾ ಎಂದು ರಾಮಣ್ಣ  ಅವರಿಗೆ ಅನಿಸಿತು. ಸತೀಶ್ ಅವರು ಅದನ್ನು ಕೈಯಿಂದ ಎತ್ತಿದಾಗ ಅದು ಬ್ರಾಸ್‍ಲೆಟ್ ಎಂದು ತಿಳಿಯಿತು ಎಂದು ತಿಳಿಸಿದರು. ಇವರ ಪ್ರಾಮಾಣಿಕತೆಗೆ ತುಂಬು ಹೃದಯದ ಧನ್ಯವಾದ ಹೇಳಲಾಯಿತು. ಈಗ ಉಡುಗೊರೆಯಾಗಿ ಚಿನ್ನದ ನಾಣ್ಯಗಳನ್ನು ನೀಡಿ ಗೌರವಿಸಲಾಯಿತು.

( ನಿರೂಪಣೆ : ಕೃಷ್ಣವೇಣಿ ಪ್ರಸಾದ್ ಮುಳಿಯ)

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ
ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group