Advertisement
ಜಿಲ್ಲೆ

94 ಸಿ ಹಾಗೂ 94 ಸಿಸಿ ಅಡಿ ಅರ್ಹ ಮನೆಗಳಿಗೂ ಪರಿಹಾರ

Share

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದ್ದಾರೆ.

Advertisement
Advertisement

ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆಯನ್ನು ಕೈಗೊಂಡ ಸಂದರ್ಭದಲ್ಲಿ ಜನ ಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು ಈ ಬಗ್ಗೆ ಸರಕಾರದಿಂದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Advertisement

ಮುಂದುವರೆದು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94 ಸಿಸಿ ಅಡಿ ಅರ್ಹವಿದ್ದರೆ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ದಿನಾಂಕ 01-01-2015 ರ ಪೂರ್ವದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲು ಆದೇಶಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗ್ಗೆ ಜಿಲ್ಲೆಯ ಜನ ಪ್ರತಿನಿಧಿಗಳು ಮೇಲ್ಕಂಡ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತಂದು ಈ ಬಗ್ಗೆ ವಿನಂತಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯ | ಟ್ರಾಕ್ಟರ್‌ ತುಂಬಿದ ಬಟ್ಟೆ ರಾಶಿ..! |

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತಾದಿಗಳು ದಯವಿಟ್ಟು ಗಮನಿಸಿ, ಕುಮಾರಧಾರಾ ನದಿಯಲ್ಲಿ ಬಟ್ಟೆ, ಪ್ಲಾಸ್ಟಿಕ್‌…

6 mins ago

ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು…

3 hours ago

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ…

4 hours ago

Karnataka Weather | 18-06-2024 | ಜೂ.21 ರಿಂದ ಮುಂಗಾರು ಚುರುಕು | ಜೂ.28 ರಿಂದ ಮತ್ತೆ ದುರ್ಬಲ ಸಾಧ್ಯತೆ |

ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ…

9 hours ago

ಮನ – ಮನೆ – ಮನಸ್ಸಿನ ವಾತಾವರಣ…. : ಈ ಬಗ್ಗೆ ಮಾಧ್ಯಮಗಳು ಹೆಚ್ಚು ಗಮನಹರಿಸಬೇಕಾಗಿದೆ..

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ(Rain). ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು…

9 hours ago