Advertisement
ಜಿಲ್ಲೆ

94 ಸಿ ಹಾಗೂ 94 ಸಿಸಿ ಅಡಿ ಅರ್ಹ ಮನೆಗಳಿಗೂ ಪರಿಹಾರ

Share

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಸಹ ನಿಯಮಾನುಸಾರ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆಯನ್ನು ಕೈಗೊಂಡ ಸಂದರ್ಭದಲ್ಲಿ ಜನ ಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಕಂದಾಯ ಸಚಿವರು ಈ ಬಗ್ಗೆ ಸರಕಾರದಿಂದ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋದ ಪ್ರಯುಕ್ತ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಇಂತಹ ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ಮುಂದುವರೆದು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94 ಸಿಸಿ ಅಡಿ ಅರ್ಹವಿದ್ದರೆ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ದಿನಾಂಕ 01-01-2015 ರ ಪೂರ್ವದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ಸಹ ವಿಲೇವಾರಿ ಮಾಡಲು ಆದೇಶಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಸಿ ಮತ್ತು ಡಿ ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗ್ಗೆ ಜಿಲ್ಲೆಯ ಜನ ಪ್ರತಿನಿಧಿಗಳು ಮೇಲ್ಕಂಡ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಸಚಿವರ ಗಮನಕ್ಕೆ ತಂದು ಈ ಬಗ್ಗೆ ವಿನಂತಿಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

42 minutes ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

12 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

13 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

14 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

14 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

14 hours ago