ಬೆಂಗಳೂರು ನಗರ ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವ್ಯರ್ಥವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಕೆವಿಕೆ ಅಧ್ಯಯನದಲ್ಲಿ ವರ್ಷಕ್ಕೆ ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥವಾಗುತ್ತಿದೆ ಎಂಬುದನ್ನು ಉಲ್ಲೇಖಿಸಲಾಗಿದೆ. ಅನ್ನವನ್ನು ಚೆಲ್ಲುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಸಿವಿನ ಸಂಕಟ ಅನ್ನದ ಮೌಲ್ಯ ತಿಳಿದಿರುವುದರಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ, ನಾಗರಿಕ ಸಮಾಜದ ಜವಾಬ್ದಾರಿ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…