ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ ರಾಲಿಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ.
ಕೊಡಗು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲೆಗಳಿಂದ ಆಗಮಿಸಿರುವ ಯುವ ಸಮೂಹ ದೇಶಭಕ್ತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದೆ. ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಸೇನಾ ನೇಮಕಾತಿ ರಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸೇನಾ ಅಧಿಕಾರಿ ಅವರು ಸೇನಾ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…