Advertisement
Exclusive - Mirror Hunt

9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

Share

ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ ರಾಲಿಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ.

Advertisement
Advertisement

ಕೊಡಗು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲೆಗಳಿಂದ ಆಗಮಿಸಿರುವ ಯುವ ಸಮೂಹ ದೇಶಭಕ್ತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದೆ. ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

 

ಸೇನಾ ನೇಮಕಾತಿ ರಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ  ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು  ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸೇನಾ ಅಧಿಕಾರಿ ಅವರು ಸೇನಾ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

3 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago