ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ ರಾಲಿಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ.
ಕೊಡಗು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲೆಗಳಿಂದ ಆಗಮಿಸಿರುವ ಯುವ ಸಮೂಹ ದೇಶಭಕ್ತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದೆ. ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಸೇನಾ ನೇಮಕಾತಿ ರಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸೇನಾ ಅಧಿಕಾರಿ ಅವರು ಸೇನಾ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…