Advertisement
Exclusive - Mirror Hunt

9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

Share

ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಸೇನಾ ಭರ್ತಿ ರಾಲಿಯಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕರು ಆಗಮಿಸಿದ್ದಾರೆ.

ಕೊಡಗು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲೆಗಳಿಂದ ಆಗಮಿಸಿರುವ ಯುವ ಸಮೂಹ ದೇಶಭಕ್ತಿಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದೆ. ದೇಶಕ್ಕಾಗಿ ಪ್ರಾಣ ನೀಡಲೂ ಸಿದ್ಧ ಎನ್ನುವ ಹುಮ್ಮಸ್ಸಿನಲ್ಲಿ ಸೇನೆಗೆ ಭರ್ತಿಯಾಗಲು ಬಂದಿರುವುದಾಗಿ ಹೇಳಿಕೊಂಡಿರುವ ಯುವಕರು ಎಲ್ಲಾ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಮಡಿಕೇರಿಯ ಮಳೆ, ಚಳಿಗೆ ಅಂಜದೆ ಧೈರ್ಯವಾಗಿ ಮೈಯೊಡ್ಡಿ ಮುಂಜಾನೆ 5 ಗಂಟೆಯಿಂದಲೇ ಓಟ, ಹಾರಾಟ ಸೇರಿದಂತೆ ವಿವಿಧ ಕಸರತ್ತುಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

 

ಸೇನಾ ನೇಮಕಾತಿ ರಾಲಿಯಲ್ಲಿ ಪಾಲ್ಗೊಳ್ಳಲು ಸುಮಾರು 9,572 ಮಂದಿ ಹೆಸರು ನೋಂದಾಯಿಸಿದ್ದಾರೆ. ಮೊದಲ ದಿನ 2,445 ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,948 ಮಂದಿ ಹಾಜರಾಗಿದ್ದರು. ಎರಡನೇ ದಿನವಾದ ಸೋಮವಾರ 2,481 ಮಂದಿಯನ್ನು ಆಹ್ವಾನಿಸಲಾಗಿತ್ತು, ಇವರಲ್ಲಿ 1,825 ಮಂದಿ ಅಭ್ಯರ್ಥಿಗಳು ಹಾಜರಾಗಿ ಓಟ, ಉದ್ದ ಜಿಗಿತ, ಎತ್ತರ ಜಿಗಿತ ಹೀಗೆ ವಿವಿಧ ದೈಹಿಕ ಸಾಮರ್ಥ್ಯ  ಪರೀಕ್ಷೆಗಳಲ್ಲಿ ಪಾಲ್ಗೊಂಡಿದ್ದರು ಎಂದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕ.ಗೀತಾ ಅವರು ಮಾಹಿತಿ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು  ಭೇಟಿ ನೀಡಿ ಪರಿಶೀಲಿಸಿದರು. ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸೇನಾ ಅಧಿಕಾರಿ ಅವರು ಸೇನಾ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago