Advertisement
ಸುದ್ದಿಗಳು

ಜನವರಿ ವೇಳೆಗೆ ಮತ್ತೆ ಬರ್ಮಾ ಅಡಿಕೆ ಭೀತಿ : ಅಡಿಕೆ ಮಾರುಕಟ್ಟೆ ಸ್ಥಿರತೆ ಕಡೆಗೆ ಬೇಕಿದೆ ಗಮನ

Share

ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ ವಹಿಸಬೇಕಾದ ಅಗತ್ಯ ಇದೆ. ಜನವರಿ ವೇಳೆಗೆ ಬರ್ಮಾದಿಂದ ಅಡಿಕೆಯು ಕಳ್ಳ ದಾರಿ ಮೂಲಕ ಬರುವ ಸಾಧ್ಯತೆ ಇದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಜನವರಿಯಲ್ಲಿ ಅಡಿಕೆ ಕಳ್ಳ ದಾರಿಯಲ್ಲಿ  ಬಂದಿತ್ತು. ಅದು ಕಳಪೆ ಗುಣಮಟ್ಟದ ಅಡಿಕೆಯಾಗಿದ್ದರೂ ಇಲ್ಲಿನ ಮಾರುಕಟ್ಟೆಯ ಮೇಲೆ ಒಮ್ಮೆಲೇ ಹೊಡೆತ ನೀಡಬಹುದಾಗಿದೆ.

Advertisement
Advertisement
Advertisement
Advertisement

ಸದ್ಯಕ್ಕೆ ಅಡಿಕೆ  ಮಾರುಕಟ್ಟೆಯಲ್ಲಿ  ಸಂಸತಸ ವಾತಾವರಣ ಇದೆ. ಡಿಸೆಂಬರ್ ನಂತರ ಇದೇ ಸಂತಸ ಉಳಿಯಬೇಕಾದರೆ ಮಾರುಕಟ್ಟೆಯಲ್ಲಿ  ಹಿಡಿತ ಇರಲೇ ಬೇಕಿದೆ. ಅನಗತ್ಯ ಏರಿಕೆ ಹಾಗೂ ಇಳಿಕೆ ಸಾಮಾನ್ಯ ಅಡಿಕೆ ಬೆಳೆಗಾರರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ  ಈಗಲೇ ಹಿಡಿತ ಹಾಗೂ ನಿಯಂತ್ರಣ ಅಗತ್ಯವಿದೆ. ಕಳೆದ ಬಾರಿ ಕೊಳೆರೋಗ ವಿಪರೀತ ಬಾಧಿಸಿದ ಕಾರಣದಿಂದ ಅಡಿಕೆಯ ಕೊರತೆ ಮಾರುಕಟ್ಟೆಯಲ್ಲಿದೆ. ಈ ನಡುವೆ ಬರ್ಮಾದಿಂದ ಅಡಿಕೆ ಬರಲು ಸಿದ್ಧತೆ ನಡೆಸಿದೆ. ಇದು ಕಳಪೆ ಗುಣಮಟ್ಟದ ಅಡಿಕೆಯಾದರೂ ಈಗಿನ ಪರಿಸ್ಥಿತಿಯಲ್ಲಿ ಈ ಅಡಿಕೆ ಆಮದು ತಡೆಗೆ ಸಾಧ್ಯವಿಲ್ಲ.

Advertisement

ಶ್ರೀಲಂಕಾ, ಬಾಂಗ್ಲಾ ಮೊದಲಾದ ಕಳ್ಳದಾರಿಯಲ್ಲಿ  ಅಡಿಕೆ ಬರದಂತೆ ತಡೆಗೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಿದ್ದರೂ ಭಾರತದೊಳಗೆ ಅಡಿಕೆ ತರಲು ಪ್ರಯತ್ನ ನಡೆಸಿದ್ದಾರೆ ಎಂಬ ಸುಳಿವು ಲಭ್ಯವಾಗಿದ್ದು ಜನವರಿ 15 ರ ಹೊತ್ತಿಗೆ ಭಾರತದೊಳಕ್ಕೆ ಆಗಮಿಸಿ ಇಲ್ಲಿನ ಅಡಿಕೆ ಜೊತೆ ಸೇರಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಅಡಿಕೆ ಮಾರುಕಟ್ಟೆ, ಧಾರಣೆಗೆ ಈಗಲೇ ನಿಯಂತ್ರಣ ಬೇಕಿದೆ.  ಸದ್ಯ ಅನಗತ್ಯವಾಗಿ ಮಾರುಕಟ್ಟೆ ಏರಿಳಿಕೆ ಮಾಡಿ ನಂತರ ಬರ್ಮಾ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡುವ ಆಟವೊಂದು ಸಜ್ಜಾಗುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆ ಅಧ್ಯಯನ ನಡೆಸಿ ಅಡಿಕೆಯನ್ನು ಮಾರುಕಟ್ಟೆಗೆ ಬಿಟ್ಟರೆ ಜನವರಿ ನಂತರ ಎಪ್ರಿಲ್- ಮೇ ವರೆಗೂ ಅಡಿಕೆ ಧಾರಣೆ ಸ್ಥಿರತೆ ಕಾಣಬಹುದು.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago