Advertisement
ಸುದ್ದಿಗಳು

ಜನವರಿ ವೇಳೆಗೆ ಮತ್ತೆ ಬರ್ಮಾ ಅಡಿಕೆ ಭೀತಿ : ಅಡಿಕೆ ಮಾರುಕಟ್ಟೆ ಸ್ಥಿರತೆ ಕಡೆಗೆ ಬೇಕಿದೆ ಗಮನ

Share

ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ ವಹಿಸಬೇಕಾದ ಅಗತ್ಯ ಇದೆ. ಜನವರಿ ವೇಳೆಗೆ ಬರ್ಮಾದಿಂದ ಅಡಿಕೆಯು ಕಳ್ಳ ದಾರಿ ಮೂಲಕ ಬರುವ ಸಾಧ್ಯತೆ ಇದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಜನವರಿಯಲ್ಲಿ ಅಡಿಕೆ ಕಳ್ಳ ದಾರಿಯಲ್ಲಿ  ಬಂದಿತ್ತು. ಅದು ಕಳಪೆ ಗುಣಮಟ್ಟದ ಅಡಿಕೆಯಾಗಿದ್ದರೂ ಇಲ್ಲಿನ ಮಾರುಕಟ್ಟೆಯ ಮೇಲೆ ಒಮ್ಮೆಲೇ ಹೊಡೆತ ನೀಡಬಹುದಾಗಿದೆ.

ಸದ್ಯಕ್ಕೆ ಅಡಿಕೆ  ಮಾರುಕಟ್ಟೆಯಲ್ಲಿ  ಸಂಸತಸ ವಾತಾವರಣ ಇದೆ. ಡಿಸೆಂಬರ್ ನಂತರ ಇದೇ ಸಂತಸ ಉಳಿಯಬೇಕಾದರೆ ಮಾರುಕಟ್ಟೆಯಲ್ಲಿ  ಹಿಡಿತ ಇರಲೇ ಬೇಕಿದೆ. ಅನಗತ್ಯ ಏರಿಕೆ ಹಾಗೂ ಇಳಿಕೆ ಸಾಮಾನ್ಯ ಅಡಿಕೆ ಬೆಳೆಗಾರರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ  ಈಗಲೇ ಹಿಡಿತ ಹಾಗೂ ನಿಯಂತ್ರಣ ಅಗತ್ಯವಿದೆ. ಕಳೆದ ಬಾರಿ ಕೊಳೆರೋಗ ವಿಪರೀತ ಬಾಧಿಸಿದ ಕಾರಣದಿಂದ ಅಡಿಕೆಯ ಕೊರತೆ ಮಾರುಕಟ್ಟೆಯಲ್ಲಿದೆ. ಈ ನಡುವೆ ಬರ್ಮಾದಿಂದ ಅಡಿಕೆ ಬರಲು ಸಿದ್ಧತೆ ನಡೆಸಿದೆ. ಇದು ಕಳಪೆ ಗುಣಮಟ್ಟದ ಅಡಿಕೆಯಾದರೂ ಈಗಿನ ಪರಿಸ್ಥಿತಿಯಲ್ಲಿ ಈ ಅಡಿಕೆ ಆಮದು ತಡೆಗೆ ಸಾಧ್ಯವಿಲ್ಲ.

ಶ್ರೀಲಂಕಾ, ಬಾಂಗ್ಲಾ ಮೊದಲಾದ ಕಳ್ಳದಾರಿಯಲ್ಲಿ  ಅಡಿಕೆ ಬರದಂತೆ ತಡೆಗೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಿದ್ದರೂ ಭಾರತದೊಳಗೆ ಅಡಿಕೆ ತರಲು ಪ್ರಯತ್ನ ನಡೆಸಿದ್ದಾರೆ ಎಂಬ ಸುಳಿವು ಲಭ್ಯವಾಗಿದ್ದು ಜನವರಿ 15 ರ ಹೊತ್ತಿಗೆ ಭಾರತದೊಳಕ್ಕೆ ಆಗಮಿಸಿ ಇಲ್ಲಿನ ಅಡಿಕೆ ಜೊತೆ ಸೇರಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಅಡಿಕೆ ಮಾರುಕಟ್ಟೆ, ಧಾರಣೆಗೆ ಈಗಲೇ ನಿಯಂತ್ರಣ ಬೇಕಿದೆ.  ಸದ್ಯ ಅನಗತ್ಯವಾಗಿ ಮಾರುಕಟ್ಟೆ ಏರಿಳಿಕೆ ಮಾಡಿ ನಂತರ ಬರ್ಮಾ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡುವ ಆಟವೊಂದು ಸಜ್ಜಾಗುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆ ಅಧ್ಯಯನ ನಡೆಸಿ ಅಡಿಕೆಯನ್ನು ಮಾರುಕಟ್ಟೆಗೆ ಬಿಟ್ಟರೆ ಜನವರಿ ನಂತರ ಎಪ್ರಿಲ್- ಮೇ ವರೆಗೂ ಅಡಿಕೆ ಧಾರಣೆ ಸ್ಥಿರತೆ ಕಾಣಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago