Advertisement
ಸುದ್ದಿಗಳು

ಜನವರಿ ವೇಳೆಗೆ ಮತ್ತೆ ಬರ್ಮಾ ಅಡಿಕೆ ಭೀತಿ : ಅಡಿಕೆ ಮಾರುಕಟ್ಟೆ ಸ್ಥಿರತೆ ಕಡೆಗೆ ಬೇಕಿದೆ ಗಮನ

Share

ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ ವಹಿಸಬೇಕಾದ ಅಗತ್ಯ ಇದೆ. ಜನವರಿ ವೇಳೆಗೆ ಬರ್ಮಾದಿಂದ ಅಡಿಕೆಯು ಕಳ್ಳ ದಾರಿ ಮೂಲಕ ಬರುವ ಸಾಧ್ಯತೆ ಇದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಜನವರಿಯಲ್ಲಿ ಅಡಿಕೆ ಕಳ್ಳ ದಾರಿಯಲ್ಲಿ  ಬಂದಿತ್ತು. ಅದು ಕಳಪೆ ಗುಣಮಟ್ಟದ ಅಡಿಕೆಯಾಗಿದ್ದರೂ ಇಲ್ಲಿನ ಮಾರುಕಟ್ಟೆಯ ಮೇಲೆ ಒಮ್ಮೆಲೇ ಹೊಡೆತ ನೀಡಬಹುದಾಗಿದೆ.

ಸದ್ಯಕ್ಕೆ ಅಡಿಕೆ  ಮಾರುಕಟ್ಟೆಯಲ್ಲಿ  ಸಂಸತಸ ವಾತಾವರಣ ಇದೆ. ಡಿಸೆಂಬರ್ ನಂತರ ಇದೇ ಸಂತಸ ಉಳಿಯಬೇಕಾದರೆ ಮಾರುಕಟ್ಟೆಯಲ್ಲಿ  ಹಿಡಿತ ಇರಲೇ ಬೇಕಿದೆ. ಅನಗತ್ಯ ಏರಿಕೆ ಹಾಗೂ ಇಳಿಕೆ ಸಾಮಾನ್ಯ ಅಡಿಕೆ ಬೆಳೆಗಾರರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ  ಈಗಲೇ ಹಿಡಿತ ಹಾಗೂ ನಿಯಂತ್ರಣ ಅಗತ್ಯವಿದೆ. ಕಳೆದ ಬಾರಿ ಕೊಳೆರೋಗ ವಿಪರೀತ ಬಾಧಿಸಿದ ಕಾರಣದಿಂದ ಅಡಿಕೆಯ ಕೊರತೆ ಮಾರುಕಟ್ಟೆಯಲ್ಲಿದೆ. ಈ ನಡುವೆ ಬರ್ಮಾದಿಂದ ಅಡಿಕೆ ಬರಲು ಸಿದ್ಧತೆ ನಡೆಸಿದೆ. ಇದು ಕಳಪೆ ಗುಣಮಟ್ಟದ ಅಡಿಕೆಯಾದರೂ ಈಗಿನ ಪರಿಸ್ಥಿತಿಯಲ್ಲಿ ಈ ಅಡಿಕೆ ಆಮದು ತಡೆಗೆ ಸಾಧ್ಯವಿಲ್ಲ.

ಶ್ರೀಲಂಕಾ, ಬಾಂಗ್ಲಾ ಮೊದಲಾದ ಕಳ್ಳದಾರಿಯಲ್ಲಿ  ಅಡಿಕೆ ಬರದಂತೆ ತಡೆಗೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಿದ್ದರೂ ಭಾರತದೊಳಗೆ ಅಡಿಕೆ ತರಲು ಪ್ರಯತ್ನ ನಡೆಸಿದ್ದಾರೆ ಎಂಬ ಸುಳಿವು ಲಭ್ಯವಾಗಿದ್ದು ಜನವರಿ 15 ರ ಹೊತ್ತಿಗೆ ಭಾರತದೊಳಕ್ಕೆ ಆಗಮಿಸಿ ಇಲ್ಲಿನ ಅಡಿಕೆ ಜೊತೆ ಸೇರಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಅಡಿಕೆ ಮಾರುಕಟ್ಟೆ, ಧಾರಣೆಗೆ ಈಗಲೇ ನಿಯಂತ್ರಣ ಬೇಕಿದೆ.  ಸದ್ಯ ಅನಗತ್ಯವಾಗಿ ಮಾರುಕಟ್ಟೆ ಏರಿಳಿಕೆ ಮಾಡಿ ನಂತರ ಬರ್ಮಾ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡುವ ಆಟವೊಂದು ಸಜ್ಜಾಗುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆ ಅಧ್ಯಯನ ನಡೆಸಿ ಅಡಿಕೆಯನ್ನು ಮಾರುಕಟ್ಟೆಗೆ ಬಿಟ್ಟರೆ ಜನವರಿ ನಂತರ ಎಪ್ರಿಲ್- ಮೇ ವರೆಗೂ ಅಡಿಕೆ ಧಾರಣೆ ಸ್ಥಿರತೆ ಕಾಣಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago