ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ ವಹಿಸಬೇಕಾದ ಅಗತ್ಯ ಇದೆ. ಜನವರಿ ವೇಳೆಗೆ ಬರ್ಮಾದಿಂದ ಅಡಿಕೆಯು ಕಳ್ಳ ದಾರಿ ಮೂಲಕ ಬರುವ ಸಾಧ್ಯತೆ ಇದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಜನವರಿಯಲ್ಲಿ ಅಡಿಕೆ ಕಳ್ಳ ದಾರಿಯಲ್ಲಿ ಬಂದಿತ್ತು. ಅದು ಕಳಪೆ ಗುಣಮಟ್ಟದ ಅಡಿಕೆಯಾಗಿದ್ದರೂ ಇಲ್ಲಿನ ಮಾರುಕಟ್ಟೆಯ ಮೇಲೆ ಒಮ್ಮೆಲೇ ಹೊಡೆತ ನೀಡಬಹುದಾಗಿದೆ.
ಸದ್ಯಕ್ಕೆ ಅಡಿಕೆ ಮಾರುಕಟ್ಟೆಯಲ್ಲಿ ಸಂಸತಸ ವಾತಾವರಣ ಇದೆ. ಡಿಸೆಂಬರ್ ನಂತರ ಇದೇ ಸಂತಸ ಉಳಿಯಬೇಕಾದರೆ ಮಾರುಕಟ್ಟೆಯಲ್ಲಿ ಹಿಡಿತ ಇರಲೇ ಬೇಕಿದೆ. ಅನಗತ್ಯ ಏರಿಕೆ ಹಾಗೂ ಇಳಿಕೆ ಸಾಮಾನ್ಯ ಅಡಿಕೆ ಬೆಳೆಗಾರರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈಗಲೇ ಹಿಡಿತ ಹಾಗೂ ನಿಯಂತ್ರಣ ಅಗತ್ಯವಿದೆ. ಕಳೆದ ಬಾರಿ ಕೊಳೆರೋಗ ವಿಪರೀತ ಬಾಧಿಸಿದ ಕಾರಣದಿಂದ ಅಡಿಕೆಯ ಕೊರತೆ ಮಾರುಕಟ್ಟೆಯಲ್ಲಿದೆ. ಈ ನಡುವೆ ಬರ್ಮಾದಿಂದ ಅಡಿಕೆ ಬರಲು ಸಿದ್ಧತೆ ನಡೆಸಿದೆ. ಇದು ಕಳಪೆ ಗುಣಮಟ್ಟದ ಅಡಿಕೆಯಾದರೂ ಈಗಿನ ಪರಿಸ್ಥಿತಿಯಲ್ಲಿ ಈ ಅಡಿಕೆ ಆಮದು ತಡೆಗೆ ಸಾಧ್ಯವಿಲ್ಲ.
ಶ್ರೀಲಂಕಾ, ಬಾಂಗ್ಲಾ ಮೊದಲಾದ ಕಳ್ಳದಾರಿಯಲ್ಲಿ ಅಡಿಕೆ ಬರದಂತೆ ತಡೆಗೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಿದ್ದರೂ ಭಾರತದೊಳಗೆ ಅಡಿಕೆ ತರಲು ಪ್ರಯತ್ನ ನಡೆಸಿದ್ದಾರೆ ಎಂಬ ಸುಳಿವು ಲಭ್ಯವಾಗಿದ್ದು ಜನವರಿ 15 ರ ಹೊತ್ತಿಗೆ ಭಾರತದೊಳಕ್ಕೆ ಆಗಮಿಸಿ ಇಲ್ಲಿನ ಅಡಿಕೆ ಜೊತೆ ಸೇರಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಅಡಿಕೆ ಮಾರುಕಟ್ಟೆ, ಧಾರಣೆಗೆ ಈಗಲೇ ನಿಯಂತ್ರಣ ಬೇಕಿದೆ. ಸದ್ಯ ಅನಗತ್ಯವಾಗಿ ಮಾರುಕಟ್ಟೆ ಏರಿಳಿಕೆ ಮಾಡಿ ನಂತರ ಬರ್ಮಾ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡುವ ಆಟವೊಂದು ಸಜ್ಜಾಗುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆ ಅಧ್ಯಯನ ನಡೆಸಿ ಅಡಿಕೆಯನ್ನು ಮಾರುಕಟ್ಟೆಗೆ ಬಿಟ್ಟರೆ ಜನವರಿ ನಂತರ ಎಪ್ರಿಲ್- ಮೇ ವರೆಗೂ ಅಡಿಕೆ ಧಾರಣೆ ಸ್ಥಿರತೆ ಕಾಣಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…