Advertisement
ಸುದ್ದಿಗಳು

ಜನವರಿ ವೇಳೆಗೆ ಮತ್ತೆ ಬರ್ಮಾ ಅಡಿಕೆ ಭೀತಿ : ಅಡಿಕೆ ಮಾರುಕಟ್ಟೆ ಸ್ಥಿರತೆ ಕಡೆಗೆ ಬೇಕಿದೆ ಗಮನ

Share

ಪುತ್ತೂರು: ಅಡಿಕೆ ಮಾರುಕಟ್ಟೆ ಈಗ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಆದರೆ ಮಾರುಕಟ್ಟೆ ಕಡೆಗೆ ಈಗ ಅಡಿಕೆ ಬೆಳೆಗಾರರು ಕೂಡಾ ನಿಗಾ ವಹಿಸಬೇಕಾದ ಅಗತ್ಯ ಇದೆ. ಜನವರಿ ವೇಳೆಗೆ ಬರ್ಮಾದಿಂದ ಅಡಿಕೆಯು ಕಳ್ಳ ದಾರಿ ಮೂಲಕ ಬರುವ ಸಾಧ್ಯತೆ ಇದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಜನವರಿಯಲ್ಲಿ ಅಡಿಕೆ ಕಳ್ಳ ದಾರಿಯಲ್ಲಿ  ಬಂದಿತ್ತು. ಅದು ಕಳಪೆ ಗುಣಮಟ್ಟದ ಅಡಿಕೆಯಾಗಿದ್ದರೂ ಇಲ್ಲಿನ ಮಾರುಕಟ್ಟೆಯ ಮೇಲೆ ಒಮ್ಮೆಲೇ ಹೊಡೆತ ನೀಡಬಹುದಾಗಿದೆ.

ಸದ್ಯಕ್ಕೆ ಅಡಿಕೆ  ಮಾರುಕಟ್ಟೆಯಲ್ಲಿ  ಸಂಸತಸ ವಾತಾವರಣ ಇದೆ. ಡಿಸೆಂಬರ್ ನಂತರ ಇದೇ ಸಂತಸ ಉಳಿಯಬೇಕಾದರೆ ಮಾರುಕಟ್ಟೆಯಲ್ಲಿ  ಹಿಡಿತ ಇರಲೇ ಬೇಕಿದೆ. ಅನಗತ್ಯ ಏರಿಕೆ ಹಾಗೂ ಇಳಿಕೆ ಸಾಮಾನ್ಯ ಅಡಿಕೆ ಬೆಳೆಗಾರರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ  ಈಗಲೇ ಹಿಡಿತ ಹಾಗೂ ನಿಯಂತ್ರಣ ಅಗತ್ಯವಿದೆ. ಕಳೆದ ಬಾರಿ ಕೊಳೆರೋಗ ವಿಪರೀತ ಬಾಧಿಸಿದ ಕಾರಣದಿಂದ ಅಡಿಕೆಯ ಕೊರತೆ ಮಾರುಕಟ್ಟೆಯಲ್ಲಿದೆ. ಈ ನಡುವೆ ಬರ್ಮಾದಿಂದ ಅಡಿಕೆ ಬರಲು ಸಿದ್ಧತೆ ನಡೆಸಿದೆ. ಇದು ಕಳಪೆ ಗುಣಮಟ್ಟದ ಅಡಿಕೆಯಾದರೂ ಈಗಿನ ಪರಿಸ್ಥಿತಿಯಲ್ಲಿ ಈ ಅಡಿಕೆ ಆಮದು ತಡೆಗೆ ಸಾಧ್ಯವಿಲ್ಲ.

ಶ್ರೀಲಂಕಾ, ಬಾಂಗ್ಲಾ ಮೊದಲಾದ ಕಳ್ಳದಾರಿಯಲ್ಲಿ  ಅಡಿಕೆ ಬರದಂತೆ ತಡೆಗೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಿದ್ದರೂ ಭಾರತದೊಳಗೆ ಅಡಿಕೆ ತರಲು ಪ್ರಯತ್ನ ನಡೆಸಿದ್ದಾರೆ ಎಂಬ ಸುಳಿವು ಲಭ್ಯವಾಗಿದ್ದು ಜನವರಿ 15 ರ ಹೊತ್ತಿಗೆ ಭಾರತದೊಳಕ್ಕೆ ಆಗಮಿಸಿ ಇಲ್ಲಿನ ಅಡಿಕೆ ಜೊತೆ ಸೇರಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಅಡಿಕೆ ಮಾರುಕಟ್ಟೆ, ಧಾರಣೆಗೆ ಈಗಲೇ ನಿಯಂತ್ರಣ ಬೇಕಿದೆ.  ಸದ್ಯ ಅನಗತ್ಯವಾಗಿ ಮಾರುಕಟ್ಟೆ ಏರಿಳಿಕೆ ಮಾಡಿ ನಂತರ ಬರ್ಮಾ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡುವ ಆಟವೊಂದು ಸಜ್ಜಾಗುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆ ಅಧ್ಯಯನ ನಡೆಸಿ ಅಡಿಕೆಯನ್ನು ಮಾರುಕಟ್ಟೆಗೆ ಬಿಟ್ಟರೆ ಜನವರಿ ನಂತರ ಎಪ್ರಿಲ್- ಮೇ ವರೆಗೂ ಅಡಿಕೆ ಧಾರಣೆ ಸ್ಥಿರತೆ ಕಾಣಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

36 minutes ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

46 minutes ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

16 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

17 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

22 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago