Advertisement
MIRROR FOCUS

ಗಾಜಾ ನಾಗರೀಕರಿಗೆ ಕೊಂಚ ನಿರಾಳ | ದಿನಕ್ಕೆ 4 ಗಂಟೆ ಕದನ ವಿರಾಮಕ್ಕೆ ಒಪ್ಪಿದ ಇಸ್ರೇಲ್

Share

ಕೇಳೋದು ಕೇವಲ ಗುಂಡಿನ ಸದ್ದು ಬಿಟ್ರೆ ಇಲ್ಲಿ ಬೇರೇನೂ ಕೇಳೋದಿಲ್ಲ. ಗಾಜಾ(Gaza) ನಾಗರೀಕರ ಆರ್ತನಾದ ಈ ಗುಂಡಿನ ಸದ್ದಿನ ಮಧ್ಯೆ ಹುದುಗಿ ಹೋಗಿದೆ. ತಮ್ಮ ಕಷ್ಟವನ್ನು ಜಗತ್ತಿಗೆ ಜಗತ್ತೇ ಕೇಳದಾಗಿದೆ. ಒಂದಷ್ಟು ಜನ ನೋಡಿ ಮರುಗುವುದು ಬಿಟ್ಟರೆ ಬೇರೇನು ಮಾಡಲು ಸಾಧ್ಯವಾಗುತ್ತಿಲ್ಲ. ಒಂದು ತುತ್ತಿನ ಊಟಕ್ಕು ಜನ ಪರದಾಡುತ್ತಿದ್ದಾರೆ. ಎರಡು ತುಂಡು ಬ್ರೆಡ್‌ ತಿಂದು ಜೀವನ. ಅದು ಸಿಕ್ರೆ ಸಿಕ್ತು.. ಇಲ್ಲಾಂದ್ರೆ ಇಲ್ಲ. ಕುಡಿವ ನೀರಿಗೂ ಪರದಾಡುವ ಸ್ಥಿತಿ ಇಲ್ಲಿನ ನಾಗರೀಕರದ್ದು. ಕೊನೆಗೆ ಇಲ್ಲಿಂದ ತಪ್ಪಿಸಿಕೊಂಡು ಹೋಗುವ ಅಂದ್ರು ಇದು ಅಸಾಧ್ಯದ ಕೆಲಸ.  ಇಸ್ರೇಲ್-ಹಮಾಸ್ (Israel-Hamas) ನಡುವಿನ ಯುದ್ಧ (War) ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ.

Advertisement

ದಿನಕ್ಕೆ 4 ಗಂಟೆ ಕದನ ವಿರಾಮವನ್ನು (Ceasefire) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರು ದೃಢಪಡಿಸಿದ್ದಾರೆ. ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನದಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು ತಿಳಿಸಿದ್ದಾರೆ.

ಆದರೆ ಹಮಾಸ್ ಉಗ್ರರ ವಿರುದ್ಧದ ದಾಳಿ ಎಂದಿಗೂ ನಿಲ್ಲುವುದಿಲ್ಲ. ಇಸ್ರೇಲ್‌ನ ದಾಳಿಯಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂದು ಪ್ರತಿ ದಿನ 4 ಗಂಟೆ ದಾಳಿ ನಿಲ್ಲಿಸಲಾಗುತ್ತದೆ. ಆದರೆ ಹಮಾಸ್ ಉಗ್ರರ ವಿರುದ್ಧ ದಾಳಿ ಮುಂದುವರಿಯುತ್ತಲೇ ಇರುತ್ತದೆ. ನಾವು ಗಾಜಾ ನಗರವನ್ನು ವಶಪಡಿಸಿಕೊಳ್ಳಲು ಹಾಗೂ ಇಡೀ ನಗರದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತಿಲ್ಲ. ಆದರೆ ಉಗ್ರರನ್ನು ಮಾತ್ರ ಸುಮ್ಮನೆ ಬಿಡಲಾಗುವುದಿಲ್ಲ ಎಂದಿದ್ದಾರೆ. ಇಸ್ರೇಲ್‌ನಲ್ಲಿ 1,400 ಜನರನ್ನು ಕೊಂದಿರುವ ಹಮಾಸ್ ಉಗ್ರರು ಇನ್ನು ಕೂಡಾ ಮಕ್ಕಳು, ವೃದ್ಧರು ಸೇರಿದಂತೆ 239 ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದಾರೆ ಎಂದು ಇಸ್ರೇಲ್‌ನ ಅಧಿಕಾರಿಗಳು ಹೇಳಿದ್ದಾರೆ. ಅವರಲ್ಲಿ ಸುಮಾರು 10 ಅಮೆರಿಕನ್ನರು ಸೇರಿದ್ದಾರೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದ ಮೇಲಿನ ದಾಳಿಗೆ ಇಲ್ಲಿಯವರೆಗೆ 10,800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Months have passed since the start of the war between Israel and Hamas. Israel has now agreed to a short pause in the offensive, which began on October 7. Israeli Prime Minister Benjamin Netanyahu confirmed the 4-hour-a-day ceasefire. This decision was taken in order to enable the civilians living in the war zone of Israel to move to a safe area where Israel is attacking Gaza. But he made it clear that there is no complete cessation of war.

- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

5 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

6 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

2 days ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

2 days ago