The Rural Mirror ಕಾಳಜಿ

#SwachhBharat | ತಿಪ್ಪೆಕಾಳಿ ರಂಗನಾಥ್ ನೈಜ ಸ್ವಚ್ಛತಾ ಸೇನಾನಿ | ಗಾಂಧಿಯ ಕನಸು ನನಸು ಮಾಡಲು ಟೊಂಕಕಟ್ಟಿ ನಿಂತ ವ್ಯಾಪಾರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್‌ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ. ಗ್ರಾಮದಲ್ಲಿ ತನ್ನದೇ ಆದ ನ್ಯಾಯಬೆಲೆ ಅಂಗಡಿ ಹೊಂದಿರುವ ಅವರು, ಪ್ರತಿ ಶನಿವಾರದ ದಿನ ತನ್ನ ಸ್ವಚ್ಛತಾ ರಥದ ಮೂಲಕ ಕ್ಲೀನ್‌ ಮಾಡುತ್ತಾ ಬಂದಿದ್ದಾರೆ. ಹೀಗೆ ಇವ್ರ ಸ್ವಚ್ಛತಾ ಅಭಿಯಾನವು ಈಗ 24 ವರ್ಷಗಳನ್ನ ಪೂರೈಸಿದೆ.

Advertisement
Advertisement

ಸ್ವಚ್ಛತೆಯೇ ಸೇವೆ..! : ಸ್ವಚ್ಛ ಭಾರತ ಯೋಜನೆ ಜಾರಿಗೂ ಮುನ್ನವೇ, ಗಾಂಧೀಜಿ #Gandhiji ಅವರ ಕನಸನ್ನು ನನಸು ಮಾಡಲು ಟೊಂಕಕಟ್ಟಿ ನಿಂತವರು ಈ ತಿಪ್ಪೆಕಾಳಿ ರಂಗನಾಥ್‌ ಅವರು. ತಮ್ಮ ಬೈಕ್‌ಗೆ ಟ್ರಾಲಿಯನ್ನ ಕಟ್ಟಿಕೊಂಡು ಓಡಾಡುವ ಇವ್ರು ಆ ಮೂಲಕ ತಾವು ಸ್ವಚ್ಛ ಮಾಡಿದ ಬಳಿಕ ಸಂಗ್ರಹವಾಗುವ ಕಸ ಕಡ್ಡಿಗಳನ್ನ ಅದರ ಸಹಾಯದಿಂದ ಕೊಂಡೊಯ್ದು ವಿಲೇವಾರಿ ಮಾಡುತ್ತಾರೆ. ಶಾಲಾ ಶೌಚಾಲಯದಿಂದ ಹಿಡಿದು ಚರಂಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇವರು ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾರೆ.

ಪ್ರಶಸ್ತಿಗಳ ಗೌರವ : ಮೈಸೂರು ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ, ಇಂಡಿಯನ್ ವರ್ಚುವಲ್ ಯುನಿವರ್ಸಿಟಿ ಬೆಂಗಳೂರು ಇವರಿಂದ ಗೌರವ ಡಾಕ್ಟರೇಟ್ ನೀಡಿ ತಿಪ್ಪೆಕಾಳಿ ರಂಗನಾಥ್‌ ಅವರನ್ನ ಗೌರವಿಸಲಾಗಿದೆ. ಆರಂಭದಲ್ಲಿ ರಂಗನಾಥ್‌ ಅವರು ಈ ಕೆಲಸಕ್ಕೆ ಇಳಿದಾಗ ಕುಟುಂಬಿಕರಿಂದಲೇ ಸಾಕಷ್ಟು ಅಪಸ್ವರ ಬಂದಿತ್ತು. ಆದ್ರೀಗ ಅವ್ರೆಲ್ಲ ರಂಗನಾಥ್‌ ಅವರ ಜೊತೆಗಿದ್ದು ಅವರ ಸಹಾಯಕ್ಕೆ ನಿಲ್ಲುತ್ತಾ ಬಂದಿರುವುದು ವಿಶೇಷ.

– ಅಂತರ್ಜಾಲ ಮಾಹಿತಿ

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

7 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

8 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

11 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

13 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

13 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

18 hours ago