Advertisement
The Rural Mirror ಕಾಳಜಿ

#SwachhBharat | ತಿಪ್ಪೆಕಾಳಿ ರಂಗನಾಥ್ ನೈಜ ಸ್ವಚ್ಛತಾ ಸೇನಾನಿ | ಗಾಂಧಿಯ ಕನಸು ನನಸು ಮಾಡಲು ಟೊಂಕಕಟ್ಟಿ ನಿಂತ ವ್ಯಾಪಾರಿ |

Share

ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್‌ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ. ಗ್ರಾಮದಲ್ಲಿ ತನ್ನದೇ ಆದ ನ್ಯಾಯಬೆಲೆ ಅಂಗಡಿ ಹೊಂದಿರುವ ಅವರು, ಪ್ರತಿ ಶನಿವಾರದ ದಿನ ತನ್ನ ಸ್ವಚ್ಛತಾ ರಥದ ಮೂಲಕ ಕ್ಲೀನ್‌ ಮಾಡುತ್ತಾ ಬಂದಿದ್ದಾರೆ. ಹೀಗೆ ಇವ್ರ ಸ್ವಚ್ಛತಾ ಅಭಿಯಾನವು ಈಗ 24 ವರ್ಷಗಳನ್ನ ಪೂರೈಸಿದೆ.

ಸ್ವಚ್ಛತೆಯೇ ಸೇವೆ..! : ಸ್ವಚ್ಛ ಭಾರತ ಯೋಜನೆ ಜಾರಿಗೂ ಮುನ್ನವೇ, ಗಾಂಧೀಜಿ #Gandhiji ಅವರ ಕನಸನ್ನು ನನಸು ಮಾಡಲು ಟೊಂಕಕಟ್ಟಿ ನಿಂತವರು ಈ ತಿಪ್ಪೆಕಾಳಿ ರಂಗನಾಥ್‌ ಅವರು. ತಮ್ಮ ಬೈಕ್‌ಗೆ ಟ್ರಾಲಿಯನ್ನ ಕಟ್ಟಿಕೊಂಡು ಓಡಾಡುವ ಇವ್ರು ಆ ಮೂಲಕ ತಾವು ಸ್ವಚ್ಛ ಮಾಡಿದ ಬಳಿಕ ಸಂಗ್ರಹವಾಗುವ ಕಸ ಕಡ್ಡಿಗಳನ್ನ ಅದರ ಸಹಾಯದಿಂದ ಕೊಂಡೊಯ್ದು ವಿಲೇವಾರಿ ಮಾಡುತ್ತಾರೆ. ಶಾಲಾ ಶೌಚಾಲಯದಿಂದ ಹಿಡಿದು ಚರಂಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇವರು ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾರೆ.

ಪ್ರಶಸ್ತಿಗಳ ಗೌರವ : ಮೈಸೂರು ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ, ಇಂಡಿಯನ್ ವರ್ಚುವಲ್ ಯುನಿವರ್ಸಿಟಿ ಬೆಂಗಳೂರು ಇವರಿಂದ ಗೌರವ ಡಾಕ್ಟರೇಟ್ ನೀಡಿ ತಿಪ್ಪೆಕಾಳಿ ರಂಗನಾಥ್‌ ಅವರನ್ನ ಗೌರವಿಸಲಾಗಿದೆ. ಆರಂಭದಲ್ಲಿ ರಂಗನಾಥ್‌ ಅವರು ಈ ಕೆಲಸಕ್ಕೆ ಇಳಿದಾಗ ಕುಟುಂಬಿಕರಿಂದಲೇ ಸಾಕಷ್ಟು ಅಪಸ್ವರ ಬಂದಿತ್ತು. ಆದ್ರೀಗ ಅವ್ರೆಲ್ಲ ರಂಗನಾಥ್‌ ಅವರ ಜೊತೆಗಿದ್ದು ಅವರ ಸಹಾಯಕ್ಕೆ ನಿಲ್ಲುತ್ತಾ ಬಂದಿರುವುದು ವಿಶೇಷ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago