Advertisement
The Rural Mirror ಕಾಳಜಿ

#SwachhBharat | ತಿಪ್ಪೆಕಾಳಿ ರಂಗನಾಥ್ ನೈಜ ಸ್ವಚ್ಛತಾ ಸೇನಾನಿ | ಗಾಂಧಿಯ ಕನಸು ನನಸು ಮಾಡಲು ಟೊಂಕಕಟ್ಟಿ ನಿಂತ ವ್ಯಾಪಾರಿ |

Share

ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್‌ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ. ಗ್ರಾಮದಲ್ಲಿ ತನ್ನದೇ ಆದ ನ್ಯಾಯಬೆಲೆ ಅಂಗಡಿ ಹೊಂದಿರುವ ಅವರು, ಪ್ರತಿ ಶನಿವಾರದ ದಿನ ತನ್ನ ಸ್ವಚ್ಛತಾ ರಥದ ಮೂಲಕ ಕ್ಲೀನ್‌ ಮಾಡುತ್ತಾ ಬಂದಿದ್ದಾರೆ. ಹೀಗೆ ಇವ್ರ ಸ್ವಚ್ಛತಾ ಅಭಿಯಾನವು ಈಗ 24 ವರ್ಷಗಳನ್ನ ಪೂರೈಸಿದೆ.

ಸ್ವಚ್ಛತೆಯೇ ಸೇವೆ..! : ಸ್ವಚ್ಛ ಭಾರತ ಯೋಜನೆ ಜಾರಿಗೂ ಮುನ್ನವೇ, ಗಾಂಧೀಜಿ #Gandhiji ಅವರ ಕನಸನ್ನು ನನಸು ಮಾಡಲು ಟೊಂಕಕಟ್ಟಿ ನಿಂತವರು ಈ ತಿಪ್ಪೆಕಾಳಿ ರಂಗನಾಥ್‌ ಅವರು. ತಮ್ಮ ಬೈಕ್‌ಗೆ ಟ್ರಾಲಿಯನ್ನ ಕಟ್ಟಿಕೊಂಡು ಓಡಾಡುವ ಇವ್ರು ಆ ಮೂಲಕ ತಾವು ಸ್ವಚ್ಛ ಮಾಡಿದ ಬಳಿಕ ಸಂಗ್ರಹವಾಗುವ ಕಸ ಕಡ್ಡಿಗಳನ್ನ ಅದರ ಸಹಾಯದಿಂದ ಕೊಂಡೊಯ್ದು ವಿಲೇವಾರಿ ಮಾಡುತ್ತಾರೆ. ಶಾಲಾ ಶೌಚಾಲಯದಿಂದ ಹಿಡಿದು ಚರಂಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇವರು ಸ್ವಚ್ಛತಾ ಕಾರ್ಯ ನಡೆಸುತ್ತಾ ಬಂದಿದ್ದಾರೆ.

ಪ್ರಶಸ್ತಿಗಳ ಗೌರವ : ಮೈಸೂರು ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ, ಇಂಡಿಯನ್ ವರ್ಚುವಲ್ ಯುನಿವರ್ಸಿಟಿ ಬೆಂಗಳೂರು ಇವರಿಂದ ಗೌರವ ಡಾಕ್ಟರೇಟ್ ನೀಡಿ ತಿಪ್ಪೆಕಾಳಿ ರಂಗನಾಥ್‌ ಅವರನ್ನ ಗೌರವಿಸಲಾಗಿದೆ. ಆರಂಭದಲ್ಲಿ ರಂಗನಾಥ್‌ ಅವರು ಈ ಕೆಲಸಕ್ಕೆ ಇಳಿದಾಗ ಕುಟುಂಬಿಕರಿಂದಲೇ ಸಾಕಷ್ಟು ಅಪಸ್ವರ ಬಂದಿತ್ತು. ಆದ್ರೀಗ ಅವ್ರೆಲ್ಲ ರಂಗನಾಥ್‌ ಅವರ ಜೊತೆಗಿದ್ದು ಅವರ ಸಹಾಯಕ್ಕೆ ನಿಲ್ಲುತ್ತಾ ಬಂದಿರುವುದು ವಿಶೇಷ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

13 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

14 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago