Advertisement
ಸುದ್ದಿಗಳು

ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’ | ವರ್ಣ‌ಸಂಘರ್ಷದ ಕಥೆ ಇದು | ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ |

Share

ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’. ಈಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಾಕಷ್ಟು ಕುತೂಹಲವನ್ನು ಈ ಟೀಸರ್ ಹುಟ್ಟುಹಾಕಿದೆ. ಸಂದೇಶ್ ಶೆಟ್ಟಿ ಆಜ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಇನಾಮ್ದಾರ್ ವಂಶದ ಗಟ್ಟಿಗಿತ್ತಿ ಹೆಣ್ಣು ಮಗಳು  ಚಿತ್ರದೇವಿಯ ಪಾತ್ರದಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಚಿತ್ರಕಲಾ ರಾಜೇಶ್ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ‘ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆಯಾಗಿದೆ. ‘ಇನಾಮ್ದಾರ್’ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯ ಆಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದಗಳು’ ಎಂದು ಹೇಳುತ್ತಾರೆ. ನಿರ್ದೇಶನದ ಜೊತೆಗೆ ಸಂದೇಶ್ ಶೆಟ್ಟಿ ಆಜ್ರಿ ಅವರು ಈ ಸಿನಿಮಾದಲ್ಲೊಂದು ಪ್ರಮುಖ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ.

ಚಿತ್ರಕ್ಕೆ ನಿರಂಜನ್ ಶೆಟ್ಟಿ ತಲ್ಲೂರು ಅವರು ಹಣ ಹಾಕಿದ್ದಾರೆ. ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ‘ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಅವರು ನನ್ನ ಆತ್ಮೀಯ ಸ್ನೇಹಿತ. ಈ ಚಿತ್ರದ ಟೀಸರ್ ನೋಡಿ ನನಗಂತೂ ತುಂಬ ಖುಷಿಯಾಗಿದೆ. ಈ ಸಿನಿಮಾ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ’ ಎಂದರು. ಈ ಚಿತ್ರದಲ್ಲಿ ನಾಯಕಿಯರಾಗಿ ಚಿರಶ್ರೀ ಅಂಚನ್ ಮತ್ತು ಎಸ್ತರ್ ನರೋನ್ಹಾ ನಟಿಸಿದ್ದಾರೆ.

ಮುಖ್ಯ ಭೂಮಿಕೆಯಲ್ಲಿ ಹಿರಿಯ ನಾಟರಾದ ಅವಿನಾಶ್, ಶರತ್ ಲೋಹಿತಾಶ್ವ, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ, ಎಂ.ಕೆ.ಮಠ,‌ ರಘು ಪಾಂಡೇಶ್ವರ, ಯಶ್ ಆಚಾರ್, ಕರುಣಾಕರ್ ಕುಂದರ್, ಚಿತ್ರಕಲಾ ರಾಜೇಶ್ ಮುಂತಾದವರು ನಟಿಸಿದ್ದಾರೆ. ಹಾಡುಗಳಿಗೆ ರಾಕಿ ಸೋನು ಸಂಗೀತ ನೀಡಿದ್ದಾರೆ. ಮುರಳಿ ಅವರು ಛಾಯಾಗ್ರಹಣ ಮಾಡಿದ್ದು, ಸಂಕಲನಕಾರರಾಗಿ ಶಿವರಾಜ್ ‌ಮೇಹು ಅವರು ಕೆಲಸ ಮಾಡಿದ್ದಾರೆ. ಗೀತಾ ಸಾಯಿ ಅವರ ನೃತ್ಯ ನಿರ್ದೇಶನ ಈ ಸಿನಿಮಾಕ್ಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

6 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

19 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

19 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

20 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago