Advertisement
ಸುದ್ದಿಗಳು

ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’ | ವರ್ಣ‌ಸಂಘರ್ಷದ ಕಥೆ ಇದು | ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ |

Share

ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ ಚಿತ್ರ ‘ಇನಾಮ್ದಾರ್’. ಈಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಾಕಷ್ಟು ಕುತೂಹಲವನ್ನು ಈ ಟೀಸರ್ ಹುಟ್ಟುಹಾಕಿದೆ. ಸಂದೇಶ್ ಶೆಟ್ಟಿ ಆಜ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಇನಾಮ್ದಾರ್ ವಂಶದ ಗಟ್ಟಿಗಿತ್ತಿ ಹೆಣ್ಣು ಮಗಳು  ಚಿತ್ರದೇವಿಯ ಪಾತ್ರದಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯ ಚಿತ್ರಕಲಾ ರಾಜೇಶ್ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ‘ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ ‘ಇನಾಮ್ದಾರ್’ ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆಯಾಗಿದೆ. ‘ಇನಾಮ್ದಾರ್’ ಚಿತ್ರಕ್ಕೆ ‘ಕಪ್ಪು ಸುಂದರಿಯ ಸುತ್ತ’ ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯ ಆಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದಗಳು’ ಎಂದು ಹೇಳುತ್ತಾರೆ. ನಿರ್ದೇಶನದ ಜೊತೆಗೆ ಸಂದೇಶ್ ಶೆಟ್ಟಿ ಆಜ್ರಿ ಅವರು ಈ ಸಿನಿಮಾದಲ್ಲೊಂದು ಪ್ರಮುಖ ಪಾತ್ರಕ್ಕೂ ಬಣ್ಣ ಹಚ್ಚಿದ್ದಾರೆ.

ಚಿತ್ರಕ್ಕೆ ನಿರಂಜನ್ ಶೆಟ್ಟಿ ತಲ್ಲೂರು ಅವರು ಹಣ ಹಾಕಿದ್ದಾರೆ. ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ‘ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಅವರು ನನ್ನ ಆತ್ಮೀಯ ಸ್ನೇಹಿತ. ಈ ಚಿತ್ರದ ಟೀಸರ್ ನೋಡಿ ನನಗಂತೂ ತುಂಬ ಖುಷಿಯಾಗಿದೆ. ಈ ಸಿನಿಮಾ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ’ ಎಂದರು. ಈ ಚಿತ್ರದಲ್ಲಿ ನಾಯಕಿಯರಾಗಿ ಚಿರಶ್ರೀ ಅಂಚನ್ ಮತ್ತು ಎಸ್ತರ್ ನರೋನ್ಹಾ ನಟಿಸಿದ್ದಾರೆ.

ಮುಖ್ಯ ಭೂಮಿಕೆಯಲ್ಲಿ ಹಿರಿಯ ನಾಟರಾದ ಅವಿನಾಶ್, ಶರತ್ ಲೋಹಿತಾಶ್ವ, ಥ್ರಿಲ್ಲರ್ ಮಂಜು, ಪ್ರಮೋದ್ ಶೆಟ್ಟಿ, ಎಂ.ಕೆ.ಮಠ,‌ ರಘು ಪಾಂಡೇಶ್ವರ, ಯಶ್ ಆಚಾರ್, ಕರುಣಾಕರ್ ಕುಂದರ್, ಚಿತ್ರಕಲಾ ರಾಜೇಶ್ ಮುಂತಾದವರು ನಟಿಸಿದ್ದಾರೆ. ಹಾಡುಗಳಿಗೆ ರಾಕಿ ಸೋನು ಸಂಗೀತ ನೀಡಿದ್ದಾರೆ. ಮುರಳಿ ಅವರು ಛಾಯಾಗ್ರಹಣ ಮಾಡಿದ್ದು, ಸಂಕಲನಕಾರರಾಗಿ ಶಿವರಾಜ್ ‌ಮೇಹು ಅವರು ಕೆಲಸ ಮಾಡಿದ್ದಾರೆ. ಗೀತಾ ಸಾಯಿ ಅವರ ನೃತ್ಯ ನಿರ್ದೇಶನ ಈ ಸಿನಿಮಾಕ್ಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

60 minutes ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

1 hour ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago