Opinion

ಪ್ರಸ್ತುತ ನೀರಿನ ಹಾಗೂ ಭೂಮಿಯ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆ | ಇಂದಿನ ಈ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವೇ.?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ನಮ್ಮ ಪರಿಸರ(Environment) ವಿನಾಶದತ್ತ ಸಾಗುತ್ತಿದೆ. ಇದರ ಪರಿಣಾಮ ಮಳೆಕೊರತೆ(Rain Crisis), ಹೆಚ್ಚಿದ ತಾಪಮಾನ(Heat wave), ಪ್ರಳಯ(Flood), ವಿವಿಧ ತೆರನಾದ ರೋಗಗಳನ್ನು(Desease) ನಾವು ಎದುರಿಸುತ್ತಿದ್ದೇವೆ. ಇದಕ್ಕೆ ಮನುಷ್ಯನ ಅತಿಯಾಸೆಯೇ ಕಾರಣ. ಈಗಾಗಲೇ ನಮ್ಮ ಪ್ರಕೃತಿ ವಿನಾಶದತ್ತ ತಲುಪಿ ಅದರ ಪ್ರಕೋಪವನ್ನು ಮನುಜನಿಗೆ ತಿರುಗಿಸಿ ಕೊಡುತ್ತಿದೆ. ಇದರಿಂದ ಪಾರಾಗಬೇಕಾದರೆ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಲೇ ಬೇಕು. ಹಾಗಾಗಿ ಇತ್ತೀಚೆಗೆ ತುಮಕೂರಿನ ಸರ್ಕಾರಿ ಕಾಲೇಜೊಂದರಲ್ಲಿ  ಪ್ರಸ್ತುತ ನೀರಿನ ಹಾಗು ಭೂಮಿಯ ಸಮಸ್ಯೆಗಳ ಬಗೆಗಿನ ಚರ್ಚೆ ನಡೆಯಿತು. ಈ ಬಗ್ಗೆ ಬಂದಿರುವ ಸಂಕ್ಷಿಪ್ತ ವರದಿ ಇಲ್ಲಿದೆ..

Advertisement
Advertisement

1. ಇಂದಿನ ನೀರಿನ ಬಿಕ್ಕಟ್ಟಿಗೆ ಪ್ರಮುಖ ಕಾರಣಗಳೇನು..?  ಬೃಹತ್ ಕಾರ್ಖಾನೆಗಳೋ.? ಮನೆ ಮುಂಗಟ್ಟಿನ ದುಂದು ವೆಚ್ಚವೋ.? ಅಥವಾ ಕಾರ್ಖಾನೆಗಳಿಂದಲೀ ,  ಕೃಷಿ ಪದ್ದತಿಯಿಂದಲೋ.?  :  ನಿಮಗೆ ಗೊತ್ತಿರಲಿ, ಶೇಕಡ 89% ನೀರು ಸುಮ್ಮನೆ ಹಾಳಾಗುತ್ತಿರುವುದು ಕಾರ್ಖಾನೆ-ಕೃಷಿಯಿಂದ..!!!

2. ಇಂದಿನ ಹವಾಮಾನ ಬಿಕ್ಕಟ್ಟಿಗೆ ಮುಖ್ಯ ಕಾರಣವೇನು..? : ಬೆಟ್ಟ ಗುಡ್ಡ ಹಾಳುಗೆಡವಿದಕ್ಕೋ.? ಜನಸಂಖ್ಯೆ ಹೆಚ್ಚಾಗಿದ್ದಕ್ಕೋ.? ಎಲ್ಲೆಲ್ಲೂ ಕಾಂಕ್ರೀಟ್ ಮಯವಾದ ಕಾರಣಕ್ಕೋ.? ಸರ್ಕಾರದ ಕೆಟ್ಟ ನೀತಿಗಳ ಕಾರಣಕ್ಕೋ.? ಕ್ಯಾಪಿಟಲಿಸ್ಟ್ ಗಳ ದಬ್ಬಾಳಿಕೆ ಹಾಗು ಹಾವಳಿಗೋ.? :  ಭೂ ಮಂಡಲದಲ್ಲಿ ಹೆಚ್ಚು ಕಡಿಮೆ ಶೇ90% ಜನ ಸರಳವಾಗಿಯೇ ಬದುಕುತ್ತಿದ್ದಾರೆ… ಕ್ಯಾಪಿಟಲಿಸ್ಟ್ / ಬಹುರಾಷ್ಟ್ರೀಯ ಕಂಪನಿಗಳ ಹಾವಳಿ ಹೆಚ್ಚಾಗಿದ್ದರಿಂದ ನೈಸರ್ಗಿಕ ಸಂಪನ್ಮೂಲಗಳನ್ನು ಡೆವಲಪ್ಮೆಂಟ್ ಅನ್ನೋ ಹೆಸರಿಟ್ಟುಕೊಂಡು ಲೂಟಿ ಹೊಡೆಯುತ್ತಿದ್ದಾರೆ ಮತ್ತು ಅಂಥವರಿಗೆ ನಮ್ಮ ಸರ್ಕಾರದವರು ರತ್ನಗಂಬಳಿ ಹಾಸಿ ಕರೆಯುತ್ತಿದ್ದಾರೆ.. ಇದು ಮುಖ್ಯ ಕಾರಣ..!!!

3. ಹಾಗಾದ್ರೆ, ಇಂದಿನ ಈ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವೇ.? ಖಂಡಿತ ಸಾಧ್ಯ. ಮನುಷ್ಯನು ಮಾಡಿಕೊಂಡ ಸಮಸ್ಯೆ, ಅವನೇ ಉತ್ತರ ಹುಡುಕಿಕೊಳ್ಳಬೇಕು ಅಷ್ಟೇ. ಲಾಪೋಡಿಯದ ಲಕ್ಷ್ಮಣ್ ಸಿಂಗ್, ಮಹಾರಾಷ್ಟ್ರದ ಪಾನಿ ಫೌಂಡೇಶನ್, ರಾಜಸ್ಥಾನದ ರಾಜೇಂದ್ರ ಸಿಂಗ್ ಅಂತಹವರು ನಮಗೆ ನಿದರ್ಶನ.. ಜನ ಚಳುವಳಿಯಿಂದ ಖಂಡಿತ ಸಾಧ್ಯವಿದೆ..!!! ಪ್ರೀತಿ, ಮಮತೆ, ಅನುಬಂಧ, ತಾಳ್ಮೆ ಹಾಗು ಸಹನೆ ಹೊಂದಿರುವ ನಾಯಕ/ನಾಯಕಿಯ ಮುಂದಾಳತ್ವದ ಅವಶ್ಯಕತೆಯಿದೆಯಷ್ಟೆ. ಕೃಷಿ ನೀತಿ, ಎಕಾನಮಿ ಹಾಗು ಡೆವಲಪ್ಮೆಂಟ್ ನ ದೃಷ್ಟಿಕೋನ, ಯುವಕರಲ್ಲಿ ನೈಸರ್ಗಿಕ ಸಮನ್ಮೂಲಗಳ ಬಗ್ಗೆ ಅರಿವು ಮೂಡಿಸಿದಲ್ಲಿ ಇನ್ನ ಇಪತ್ತು-ಮೂವತ್ತು ವರ್ಷಗಳಲ್ಲಿ ಈ ಬಿಕಟ್ಟಿನಿಂದ ಹೊರಬರಲು ಖಂಡಿತ ಸಾಧ್ಯವಿದೆ..

ಇಲ್ಲದಿದ್ದರೆ ಏನಾದೀತು..? :  ಕೃಷಿಭೂಮಿ ಮರುಭೂಮಿಯಾಗುವುದು,  ಅಪೌಷ್ಠಿಕತೆ ತಾಂಡವ ವಾಡುವುದು, ನೀರಿಗಾಗಿ ಹಪಾಹಪಿತನ ಹುಟ್ಟುವುದು,  ಉಸಿರಾಡೋ ಗಾಳಿಗೂ ಅಭಾವ ಹೆಚ್ಚುವುದು,  ಮನುಷ್ಯನ ಜೀವಿತ ಅವಧಿ ಕ್ಷೀಣಿಸುವುದು, ಬಡಜನರಿಗಂತೂ ಮೂಲ ಸೌಕರ್ಯಗಳ ಕೊರತೆಯಿಂದಾಗಿ ರೋಗ-ರುಜಿನಗಳಿಗೆ ಸಿಕ್ಕಿ ನರಳುವಂತಾಗುತ್ತದೆ, ಇನ್ನೂ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಭಿಕಾರಿಗಳಾಗುವರು, ಬಹಳಷ್ಟು ಗಿಡ-ಮರಗಳು, ಜೀವ-ಜಂತುಗಳು ಮಾಯವಾಗುವವು, ಬಿಸಿಲಿನ ಆರ್ಭಟ ಹೆಚ್ಚುವುದು, ಮಳೆ ನೀರಿನ ರಭಸಕ್ಕೆ ಮಣ್ಣು ಕೊಚ್ಚಿ ಸಮುದ್ರದ ಪಾಲಾಗುವುದು… ಹೇಳುತ್ತಿದ್ದರೆ ಕೊನೆಯಿಲ್ಲ… ಹೀಗೆ ಭೀಕರ ಸ್ಥಿತಿಗೆ ಸಿಲುಕಿ, ನರಳಾಟದ ಬದುಕು ನಮ್ಮ ಮುಂದೆ ಈಗ ಕನ್ನಡಿ ಹಿಡಿದಂತಿದೆ..

Advertisement

4. ನಮ್ಮ ಮುಂದಿನ ಸ್ಥಿತಿಗತಿ ಹೀಗಿದ್ದಲ್ಲಿ, ನಾವೇನು ಮಾಡಬೇಕು.?

  • ಮೊದಲು ಈ ವಿಪರೀತ ಹಣಕ್ಕಾಗಿ ಹೋರಾಡುತ್ತಿರುವ ಬದುಕನ್ನು ಸರಳವಾಗಿಸಿಕೊಳ್ಳಬೇಕು, ವ್ಯಾಪಾರೀಕರಣದ, ಹೊಡೆದಾಟದ, ವ್ಯಾಮೋಹದ ಬದುಕನ್ನು ಬಿಡಬೇಕು.. ಪ್ರೀತಿ, ಸಹನೆ, ಸಂತೃಪ್ತಿಯ ಬದುಕನ್ನು ಕಟ್ಟಿಕೊಳ್ಳಬೇಕು.
  • ಪ್ರಕೃತಿಯನ್ನು – ಮನುಷ್ಯರನ್ನು ಹಿಂಸಿಸದ ರೀತಿಯಲ್ಲಿ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು.
  • ಎಲ್ಲಾ ಜೀವಿಗಳು ನಮ್ಮಂತೆಯೇ ಎಂದು ಭಾವಿಸುವ, ಗೌರವಿಸುವ, ಪ್ರೀತಿಸುವ ವಿಚಾರಧಾರೆಗಳನ್ನು ಮಕ್ಕಳಲ್ಲಿ ಕಾರ್ಯರೂಪಿತವಾಗಿ ತರಬೇಕು.
  • ಮನೆ, ಶಾಲೆ ಹಾಗು ಕಟ್ಟಡಗಳು ಚಿಕ್ಕದಾಗಿ, ಗಿಡ-ಮರ ಬಳ್ಳಿಯ ಸಂಯೋಜನೆಯಲ್ಲಿ ಕಟ್ಟಿಕೊಳ್ಳಬೇಕು. ಮಳೆ ನೀರಿನ ಕೊಯ್ಲು ಹಾಗು ಶೇಖರಣೆ, ಮಣ್ಣಿನ ಬಗ್ಗೆ ಮಮತೆ, ವಿಜ್ಞಾನ ಹಾಗು ಅರಿವು ಎಲ್ಲರಲ್ಲೂ ಮನೆಮಾಡಬೇಕು.
  • ಕೃಷಿ ಹಾಗು ಗುಡಿ ಕೈಗಾರಿಕೆಗಳು ಹಳ್ಳಿ-ಹಳ್ಳಿಗಳಲ್ಲೂ ಸ್ಥಾಪಿತವಾಗಬೇಕು.
  • ಬಂಡವಾಳ ಶಾಹಿಗಳು / ದೊಡ್ಡ ದೊಡ್ಡ ಕಾರ್ಖಾನೆಗಳು / ಬಹು ರಾಷ್ಟ್ರೀಯ ಕಂಪನಿಗಳು ಲಗ್ಗೆ ಇಡದಂತೆ ನೋಡಿಕೊಳ್ಳಬೇಕು.
  • ಗ್ರಾಮ ಪಂಚಾಯಿತಿ ನಮ್ಮ ಪ್ರಮುಖ ಸರ್ಕಾರವಾಗಬೇಕು.
  • ಜನರ ಸಹಭಾಗಿತ್ವದ ನೀತಿ ಜಾರಿಗೊಳಿಸಬೇಕು.
  • ಸರಳತೆ, ಶಾಂತಿ, ಪ್ರೀತಿಯ ಬದುಕು ಮಕ್ಕಳ ಪಾಠಗಳಲ್ಲಿ ಲೀನವಾಗಬೇಕು.
  • ಮಕ್ಕಳನ್ನು ಕಾಯಕಕ್ಕೆ ರೂಢಿ ಮಾಡಬೇಕು.
  • ಕಾಯಕ ಆಧಾರಿತ ಕಲಿಕೆ ಪ್ರತಿ ಹಳ್ಳಿಗಳಲ್ಲೂ ಸ್ಥಾಪಿತವಾಗಬೇಕು.

ಹೀಗೆ ಹತ್ತು ಹಲವು ಬಗೆಯ ಚಿಂತನೆ ಚರ್ಚೆಗಳೊಂದಿಗೆ..ಕಥೆಗಳ ಸ್ವರೂಪಗೊಂದಿಗೆ ಎರಡು ತಾಸು ವಿದ್ಯಾರ್ಥಿಗಳ ಜೊತೆಗಿನ ಸಂವಾದ – ಚರ್ಚೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

3 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

3 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

4 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

4 hours ago