Advertisement
Opinion

ಪ್ರಸ್ತುತ ನೀರಿನ ಹಾಗೂ ಭೂಮಿಯ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆ | ಇಂದಿನ ಈ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವೇ.?

Share

ದಿನದಿಂದ ದಿನಕ್ಕೆ ನಮ್ಮ ಪರಿಸರ(Environment) ವಿನಾಶದತ್ತ ಸಾಗುತ್ತಿದೆ. ಇದರ ಪರಿಣಾಮ ಮಳೆಕೊರತೆ(Rain Crisis), ಹೆಚ್ಚಿದ ತಾಪಮಾನ(Heat wave), ಪ್ರಳಯ(Flood), ವಿವಿಧ ತೆರನಾದ ರೋಗಗಳನ್ನು(Desease) ನಾವು ಎದುರಿಸುತ್ತಿದ್ದೇವೆ. ಇದಕ್ಕೆ ಮನುಷ್ಯನ ಅತಿಯಾಸೆಯೇ ಕಾರಣ. ಈಗಾಗಲೇ ನಮ್ಮ ಪ್ರಕೃತಿ ವಿನಾಶದತ್ತ ತಲುಪಿ ಅದರ ಪ್ರಕೋಪವನ್ನು ಮನುಜನಿಗೆ ತಿರುಗಿಸಿ ಕೊಡುತ್ತಿದೆ. ಇದರಿಂದ ಪಾರಾಗಬೇಕಾದರೆ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಲೇ ಬೇಕು. ಹಾಗಾಗಿ ಇತ್ತೀಚೆಗೆ ತುಮಕೂರಿನ ಸರ್ಕಾರಿ ಕಾಲೇಜೊಂದರಲ್ಲಿ  ಪ್ರಸ್ತುತ ನೀರಿನ ಹಾಗು ಭೂಮಿಯ ಸಮಸ್ಯೆಗಳ ಬಗೆಗಿನ ಚರ್ಚೆ ನಡೆಯಿತು. ಈ ಬಗ್ಗೆ ಬಂದಿರುವ ಸಂಕ್ಷಿಪ್ತ ವರದಿ ಇಲ್ಲಿದೆ..

1. ಇಂದಿನ ನೀರಿನ ಬಿಕ್ಕಟ್ಟಿಗೆ ಪ್ರಮುಖ ಕಾರಣಗಳೇನು..?  ಬೃಹತ್ ಕಾರ್ಖಾನೆಗಳೋ.? ಮನೆ ಮುಂಗಟ್ಟಿನ ದುಂದು ವೆಚ್ಚವೋ.? ಅಥವಾ ಕಾರ್ಖಾನೆಗಳಿಂದಲೀ ,  ಕೃಷಿ ಪದ್ದತಿಯಿಂದಲೋ.?  :  ನಿಮಗೆ ಗೊತ್ತಿರಲಿ, ಶೇಕಡ 89% ನೀರು ಸುಮ್ಮನೆ ಹಾಳಾಗುತ್ತಿರುವುದು ಕಾರ್ಖಾನೆ-ಕೃಷಿಯಿಂದ..!!!

2. ಇಂದಿನ ಹವಾಮಾನ ಬಿಕ್ಕಟ್ಟಿಗೆ ಮುಖ್ಯ ಕಾರಣವೇನು..? : ಬೆಟ್ಟ ಗುಡ್ಡ ಹಾಳುಗೆಡವಿದಕ್ಕೋ.? ಜನಸಂಖ್ಯೆ ಹೆಚ್ಚಾಗಿದ್ದಕ್ಕೋ.? ಎಲ್ಲೆಲ್ಲೂ ಕಾಂಕ್ರೀಟ್ ಮಯವಾದ ಕಾರಣಕ್ಕೋ.? ಸರ್ಕಾರದ ಕೆಟ್ಟ ನೀತಿಗಳ ಕಾರಣಕ್ಕೋ.? ಕ್ಯಾಪಿಟಲಿಸ್ಟ್ ಗಳ ದಬ್ಬಾಳಿಕೆ ಹಾಗು ಹಾವಳಿಗೋ.? :  ಭೂ ಮಂಡಲದಲ್ಲಿ ಹೆಚ್ಚು ಕಡಿಮೆ ಶೇ90% ಜನ ಸರಳವಾಗಿಯೇ ಬದುಕುತ್ತಿದ್ದಾರೆ… ಕ್ಯಾಪಿಟಲಿಸ್ಟ್ / ಬಹುರಾಷ್ಟ್ರೀಯ ಕಂಪನಿಗಳ ಹಾವಳಿ ಹೆಚ್ಚಾಗಿದ್ದರಿಂದ ನೈಸರ್ಗಿಕ ಸಂಪನ್ಮೂಲಗಳನ್ನು ಡೆವಲಪ್ಮೆಂಟ್ ಅನ್ನೋ ಹೆಸರಿಟ್ಟುಕೊಂಡು ಲೂಟಿ ಹೊಡೆಯುತ್ತಿದ್ದಾರೆ ಮತ್ತು ಅಂಥವರಿಗೆ ನಮ್ಮ ಸರ್ಕಾರದವರು ರತ್ನಗಂಬಳಿ ಹಾಸಿ ಕರೆಯುತ್ತಿದ್ದಾರೆ.. ಇದು ಮುಖ್ಯ ಕಾರಣ..!!!

3. ಹಾಗಾದ್ರೆ, ಇಂದಿನ ಈ ಬಿಕ್ಕಟ್ಟಿನ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವೇ.? ಖಂಡಿತ ಸಾಧ್ಯ. ಮನುಷ್ಯನು ಮಾಡಿಕೊಂಡ ಸಮಸ್ಯೆ, ಅವನೇ ಉತ್ತರ ಹುಡುಕಿಕೊಳ್ಳಬೇಕು ಅಷ್ಟೇ. ಲಾಪೋಡಿಯದ ಲಕ್ಷ್ಮಣ್ ಸಿಂಗ್, ಮಹಾರಾಷ್ಟ್ರದ ಪಾನಿ ಫೌಂಡೇಶನ್, ರಾಜಸ್ಥಾನದ ರಾಜೇಂದ್ರ ಸಿಂಗ್ ಅಂತಹವರು ನಮಗೆ ನಿದರ್ಶನ.. ಜನ ಚಳುವಳಿಯಿಂದ ಖಂಡಿತ ಸಾಧ್ಯವಿದೆ..!!! ಪ್ರೀತಿ, ಮಮತೆ, ಅನುಬಂಧ, ತಾಳ್ಮೆ ಹಾಗು ಸಹನೆ ಹೊಂದಿರುವ ನಾಯಕ/ನಾಯಕಿಯ ಮುಂದಾಳತ್ವದ ಅವಶ್ಯಕತೆಯಿದೆಯಷ್ಟೆ. ಕೃಷಿ ನೀತಿ, ಎಕಾನಮಿ ಹಾಗು ಡೆವಲಪ್ಮೆಂಟ್ ನ ದೃಷ್ಟಿಕೋನ, ಯುವಕರಲ್ಲಿ ನೈಸರ್ಗಿಕ ಸಮನ್ಮೂಲಗಳ ಬಗ್ಗೆ ಅರಿವು ಮೂಡಿಸಿದಲ್ಲಿ ಇನ್ನ ಇಪತ್ತು-ಮೂವತ್ತು ವರ್ಷಗಳಲ್ಲಿ ಈ ಬಿಕಟ್ಟಿನಿಂದ ಹೊರಬರಲು ಖಂಡಿತ ಸಾಧ್ಯವಿದೆ..

ಇಲ್ಲದಿದ್ದರೆ ಏನಾದೀತು..? :  ಕೃಷಿಭೂಮಿ ಮರುಭೂಮಿಯಾಗುವುದು,  ಅಪೌಷ್ಠಿಕತೆ ತಾಂಡವ ವಾಡುವುದು, ನೀರಿಗಾಗಿ ಹಪಾಹಪಿತನ ಹುಟ್ಟುವುದು,  ಉಸಿರಾಡೋ ಗಾಳಿಗೂ ಅಭಾವ ಹೆಚ್ಚುವುದು,  ಮನುಷ್ಯನ ಜೀವಿತ ಅವಧಿ ಕ್ಷೀಣಿಸುವುದು, ಬಡಜನರಿಗಂತೂ ಮೂಲ ಸೌಕರ್ಯಗಳ ಕೊರತೆಯಿಂದಾಗಿ ರೋಗ-ರುಜಿನಗಳಿಗೆ ಸಿಕ್ಕಿ ನರಳುವಂತಾಗುತ್ತದೆ, ಇನ್ನೂ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಭಿಕಾರಿಗಳಾಗುವರು, ಬಹಳಷ್ಟು ಗಿಡ-ಮರಗಳು, ಜೀವ-ಜಂತುಗಳು ಮಾಯವಾಗುವವು, ಬಿಸಿಲಿನ ಆರ್ಭಟ ಹೆಚ್ಚುವುದು, ಮಳೆ ನೀರಿನ ರಭಸಕ್ಕೆ ಮಣ್ಣು ಕೊಚ್ಚಿ ಸಮುದ್ರದ ಪಾಲಾಗುವುದು… ಹೇಳುತ್ತಿದ್ದರೆ ಕೊನೆಯಿಲ್ಲ… ಹೀಗೆ ಭೀಕರ ಸ್ಥಿತಿಗೆ ಸಿಲುಕಿ, ನರಳಾಟದ ಬದುಕು ನಮ್ಮ ಮುಂದೆ ಈಗ ಕನ್ನಡಿ ಹಿಡಿದಂತಿದೆ..

4. ನಮ್ಮ ಮುಂದಿನ ಸ್ಥಿತಿಗತಿ ಹೀಗಿದ್ದಲ್ಲಿ, ನಾವೇನು ಮಾಡಬೇಕು.?

  • ಮೊದಲು ಈ ವಿಪರೀತ ಹಣಕ್ಕಾಗಿ ಹೋರಾಡುತ್ತಿರುವ ಬದುಕನ್ನು ಸರಳವಾಗಿಸಿಕೊಳ್ಳಬೇಕು, ವ್ಯಾಪಾರೀಕರಣದ, ಹೊಡೆದಾಟದ, ವ್ಯಾಮೋಹದ ಬದುಕನ್ನು ಬಿಡಬೇಕು.. ಪ್ರೀತಿ, ಸಹನೆ, ಸಂತೃಪ್ತಿಯ ಬದುಕನ್ನು ಕಟ್ಟಿಕೊಳ್ಳಬೇಕು.
  • ಪ್ರಕೃತಿಯನ್ನು – ಮನುಷ್ಯರನ್ನು ಹಿಂಸಿಸದ ರೀತಿಯಲ್ಲಿ ಬದುಕಿನ ದಾರಿಯನ್ನು ಕಂಡುಕೊಳ್ಳಬೇಕು.
  • ಎಲ್ಲಾ ಜೀವಿಗಳು ನಮ್ಮಂತೆಯೇ ಎಂದು ಭಾವಿಸುವ, ಗೌರವಿಸುವ, ಪ್ರೀತಿಸುವ ವಿಚಾರಧಾರೆಗಳನ್ನು ಮಕ್ಕಳಲ್ಲಿ ಕಾರ್ಯರೂಪಿತವಾಗಿ ತರಬೇಕು.
  • ಮನೆ, ಶಾಲೆ ಹಾಗು ಕಟ್ಟಡಗಳು ಚಿಕ್ಕದಾಗಿ, ಗಿಡ-ಮರ ಬಳ್ಳಿಯ ಸಂಯೋಜನೆಯಲ್ಲಿ ಕಟ್ಟಿಕೊಳ್ಳಬೇಕು. ಮಳೆ ನೀರಿನ ಕೊಯ್ಲು ಹಾಗು ಶೇಖರಣೆ, ಮಣ್ಣಿನ ಬಗ್ಗೆ ಮಮತೆ, ವಿಜ್ಞಾನ ಹಾಗು ಅರಿವು ಎಲ್ಲರಲ್ಲೂ ಮನೆಮಾಡಬೇಕು.
  • ಕೃಷಿ ಹಾಗು ಗುಡಿ ಕೈಗಾರಿಕೆಗಳು ಹಳ್ಳಿ-ಹಳ್ಳಿಗಳಲ್ಲೂ ಸ್ಥಾಪಿತವಾಗಬೇಕು.
  • ಬಂಡವಾಳ ಶಾಹಿಗಳು / ದೊಡ್ಡ ದೊಡ್ಡ ಕಾರ್ಖಾನೆಗಳು / ಬಹು ರಾಷ್ಟ್ರೀಯ ಕಂಪನಿಗಳು ಲಗ್ಗೆ ಇಡದಂತೆ ನೋಡಿಕೊಳ್ಳಬೇಕು.
  • ಗ್ರಾಮ ಪಂಚಾಯಿತಿ ನಮ್ಮ ಪ್ರಮುಖ ಸರ್ಕಾರವಾಗಬೇಕು.
  • ಜನರ ಸಹಭಾಗಿತ್ವದ ನೀತಿ ಜಾರಿಗೊಳಿಸಬೇಕು.
  • ಸರಳತೆ, ಶಾಂತಿ, ಪ್ರೀತಿಯ ಬದುಕು ಮಕ್ಕಳ ಪಾಠಗಳಲ್ಲಿ ಲೀನವಾಗಬೇಕು.
  • ಮಕ್ಕಳನ್ನು ಕಾಯಕಕ್ಕೆ ರೂಢಿ ಮಾಡಬೇಕು.
  • ಕಾಯಕ ಆಧಾರಿತ ಕಲಿಕೆ ಪ್ರತಿ ಹಳ್ಳಿಗಳಲ್ಲೂ ಸ್ಥಾಪಿತವಾಗಬೇಕು.

ಹೀಗೆ ಹತ್ತು ಹಲವು ಬಗೆಯ ಚಿಂತನೆ ಚರ್ಚೆಗಳೊಂದಿಗೆ..ಕಥೆಗಳ ಸ್ವರೂಪಗೊಂದಿಗೆ ಎರಡು ತಾಸು ವಿದ್ಯಾರ್ಥಿಗಳ ಜೊತೆಗಿನ ಸಂವಾದ – ಚರ್ಚೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

11 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago