ಚಾರ್ಲಿ ಸಿನಿಮಾ ನೋಡಿದವರಿಗೆ ನಾಯಿ ಪ್ರೀತಿಯ ಬಗ್ಗೆ ಅರಿವು ಇದೆ. ಆದರೆ ಗ್ರಾಮೀಣ ಭಾಗದಲ್ಲಿ ನಿತ್ಯವೂ ಅಂತಹದ್ದೇ ಹಲವು ಚಾರ್ಲಿ ಇದೆ. ಮನುಷ್ಯ ಪ್ರೀತಿ, ನಿಷ್ಟೆಯ ನಾಯಿಗಳು ಇವೆ. ಇಲ್ಲೊಂದು ನಾಯಿ 4 ಕಿಮೀ ದೂರು ಸ್ಕೂಟರ್ ಹಿಂದೆ ಓಡಿಕೊಂಡು ಬಂದಿದೆ. ಕಾರಣ ಪ್ರೀತಿ ಮಾತ್ರಾ…!. ಈ ಘಟನೆ ನಡೆದ್ದು ಸುಳ್ಯ ತಾಲೂಕಿನ ಬಳ್ಪ-ಕಮಿಲದಲ್ಲಿ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಳಿಯ ರತನ್ ಅವರು ಬಳ್ಪಕ್ಕೆ ಹೋಗುತ್ತಿದ್ದರು. ಈ ಸಂದರ್ಭ ನಾಯಿಯೊಂದು ಬಳ್ಪದ ಗೋಪಾಲ್ ಎಂಬವರ ಗ್ಯಾರೇಜ್ ಬಳಿ ಇರುತ್ತಿತ್ತು. ಗ್ಯಾರೇಜ್ ಮಾಲಕರು ಈ ನಾಯಿಗೆ ತಿಂಡಿ ಹಾಕುತ್ತಿದ್ದ ಕಾರಣ ಅದೇ ಆಸುಪಾಸಲ್ಲಿ ಇರುತ್ತಿತ್ತು. ಈ ನಾಯಿಯನ್ನು ರತನ್ ಅವರು ಕೊಂಡೋಗುವಂತೆ ಗೋಪಾಲ್ ಹೇಳಿದ್ದರು. ನಿರಾಕರಿಸಿದ ರತನ್ ನಾಯಿಗೆ ಬಿಸ್ಕೇಟ್ ಹಾಕಿ ಸುಮ್ಮನಿರುತ್ತಿದ್ದರು. ಈಚೆಗೆ ಗ್ಯಾರೇಜಿಗೆ ಹೋಗಿದ್ದ ರತನ್ ವಾಪಾಸ್ ಮನೆಗೆ ಬರುವಾಗ ಸ್ಕೂಟರ್ ಹಿಂದೆಯೇ ಓಡಿ ಬಂದ ನಾಯಿ 4 ಕಿಮೀ ದೂರದಲ್ಲಿರುವ ರತನ್ ಅವರ ಮನೆ ಸೇರಿತು. ರಸ್ತೆ ಬದಿಯಲ್ಲಿ ಓಡುತ್ತಲೇ ಬಂದ ನಾಯಿ ಗಮನ ಸೆಳೆಯಿತು.
ಇದು ಹೆಣ್ಣು ನಾಯಿಯಾದ್ದರಿಂದ ರಸ್ತೆ ಬದಿ ಯಾರೋ ಬಿಟ್ಟು ತೆರಳಿದ್ದರು. ಆದರೆ ನಾಯಿಯ ಪ್ರೀತಿ ಹಾಗೂ ನಿಷ್ಟೆ ಗಮನ ಸೆಳೆಯಿತು. ಈಗ ರತನ್ ಅವರು ಮನೆಯಿಂದ ಹೊರಹೋಗುತ್ತಿವಾಗ ಜೊತೆಯಲ್ಲೇ ಬರುತ್ತದೆ.
ರತನ್ ಅವರು ಪ್ರಾಣಿ ಪ್ರೇಮಿಯೂ ಆಗಿದ್ದಾರೆ. ಬಳ್ಪದ ಕಾಡಿನ ಬಳಿ ಯಾರೋ ಹೋರಿಯನ್ನು ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಅವರು ಮನೆಗೆ ತಂದು ಸಾಕಿದ್ದಾರೆ. ಈಗ ಅವರ ತೋಟದ ಸುತ್ತೆಲ್ಲಾ ಹುಲ್ಲು ಮೇಯುತ್ತಿರುತ್ತದೆ. ಅಂಬು ಎಂದು ಹೆಸರಿಟ್ಟಿದ್ದಾರೆ. ಮನೆಯಿಂದ ಹೆಸರು ಕರೆದ ತಕ್ಷಣ ಅಂಗಳಕ್ಕೆ ಬರುವ ಈ ಕರುವಿನ ಪ್ರೀತಿ ಹೆಚ್ಚು ಗಮನ ಸೆಳೆಯುತ್ತದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…