Advertisement
ಸುದ್ದಿಗಳು

ಈ ಚಾರ್ಲಿಗೆ ನೀವು ಏನು ಹೇಳುತ್ತೀರಿ… ? | 4 ಕಿಮೀ ದೂರ ಸ್ಕೂಟರ್‌ ಹಿಂದೆ ಓಡಿ ಬಂದ ನಾಯಿ…! |

Share

ಚಾರ್ಲಿ ಸಿನಿಮಾ ನೋಡಿದವರಿಗೆ ನಾಯಿ ಪ್ರೀತಿಯ ಬಗ್ಗೆ ಅರಿವು ಇದೆ. ಆದರೆ ಗ್ರಾಮೀಣ ಭಾಗದಲ್ಲಿ  ನಿತ್ಯವೂ ಅಂತಹದ್ದೇ ಹಲವು ಚಾರ್ಲಿ ಇದೆ. ಮನುಷ್ಯ ಪ್ರೀತಿ, ನಿಷ್ಟೆಯ ನಾಯಿಗಳು ಇವೆ. ಇಲ್ಲೊಂದು ನಾಯಿ  4 ಕಿಮೀ ದೂರು ಸ್ಕೂಟರ್‌ ಹಿಂದೆ ಓಡಿಕೊಂಡು ಬಂದಿದೆ. ಕಾರಣ ಪ್ರೀತಿ ಮಾತ್ರಾ…!. ಈ ಘಟನೆ ನಡೆದ್ದು ಸುಳ್ಯ ತಾಲೂಕಿನ ಬಳ್ಪ-ಕಮಿಲದಲ್ಲಿ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಳಿಯ ರತನ್‌ ಅವರು ಬಳ್ಪಕ್ಕೆ ಹೋಗುತ್ತಿದ್ದರು. ಈ ಸಂದರ್ಭ ನಾಯಿಯೊಂದು ಬಳ್ಪದ ಗೋಪಾಲ್‌ ಎಂಬವರ ಗ್ಯಾರೇಜ್‌ ಬಳಿ ಇರುತ್ತಿತ್ತು. ಗ್ಯಾರೇಜ್‌ ಮಾಲಕರು ಈ ನಾಯಿಗೆ ತಿಂಡಿ ಹಾಕುತ್ತಿದ್ದ ಕಾರಣ ಅದೇ ಆಸುಪಾಸಲ್ಲಿ ಇರುತ್ತಿತ್ತು. ಈ ನಾಯಿಯನ್ನು ರತನ್‌ ಅವರು ಕೊಂಡೋಗುವಂತೆ ಗೋಪಾಲ್‌ ಹೇಳಿದ್ದರು.  ನಿರಾಕರಿಸಿದ ರತನ್‌ ನಾಯಿಗೆ ಬಿಸ್ಕೇಟ್‌ ಹಾಕಿ ಸುಮ್ಮನಿರುತ್ತಿದ್ದರು. ಈಚೆಗೆ ಗ್ಯಾರೇಜಿಗೆ ಹೋಗಿದ್ದ ರತನ್‌ ವಾಪಾಸ್‌ ಮನೆಗೆ ಬರುವಾಗ ಸ್ಕೂಟರ್‌ ಹಿಂದೆಯೇ ಓಡಿ ಬಂದ ನಾಯಿ 4 ಕಿಮೀ ದೂರದಲ್ಲಿರುವ ರತನ್‌ ಅವರ ಮನೆ ಸೇರಿತು. ರಸ್ತೆ ಬದಿಯಲ್ಲಿ ಓಡುತ್ತಲೇ ಬಂದ ನಾಯಿ ಗಮನ ಸೆಳೆಯಿತು.

ರತನ್‌ ಮನೆಗೆ ಬಂದಿರುವ ನಾಯಿ ಅವರ ಪುತ್ರಿಯ ಜೊತೆ

ಇದು ಹೆಣ್ಣು ನಾಯಿಯಾದ್ದರಿಂದ ರಸ್ತೆ ಬದಿ ಯಾರೋ ಬಿಟ್ಟು ತೆರಳಿದ್ದರು. ಆದರೆ ನಾಯಿಯ ಪ್ರೀತಿ ಹಾಗೂ ನಿಷ್ಟೆ ಗಮನ ಸೆಳೆಯಿತು. ಈಗ ರತನ್‌ ಅವರು ಮನೆಯಿಂದ ಹೊರಹೋಗುತ್ತಿವಾಗ ಜೊತೆಯಲ್ಲೇ ಬರುತ್ತದೆ.

ರತನ್‌ ಅವರು ಪ್ರಾಣಿ ಪ್ರೇಮಿಯೂ ಆಗಿದ್ದಾರೆ. ಬಳ್ಪದ ಕಾಡಿನ ಬಳಿ ಯಾರೋ ಹೋರಿಯನ್ನು ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಅವರು ಮನೆಗೆ ತಂದು ಸಾಕಿದ್ದಾರೆ. ಈಗ ಅವರ ತೋಟದ ಸುತ್ತೆಲ್ಲಾ ಹುಲ್ಲು ಮೇಯುತ್ತಿರುತ್ತದೆ. ಅಂಬು ಎಂದು ಹೆಸರಿಟ್ಟಿದ್ದಾರೆ. ಮನೆಯಿಂದ ಹೆಸರು ಕರೆದ ತಕ್ಷಣ ಅಂಗಳಕ್ಕೆ ಬರುವ ಈ ಕರುವಿನ ಪ್ರೀತಿ ಹೆಚ್ಚು ಗಮನ ಸೆಳೆಯುತ್ತದೆ.

ರತನ್‌
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

4 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

4 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

11 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

13 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

20 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

22 hours ago