ಚಾರ್ಲಿ ಸಿನಿಮಾ ನೋಡಿದವರಿಗೆ ನಾಯಿ ಪ್ರೀತಿಯ ಬಗ್ಗೆ ಅರಿವು ಇದೆ. ಆದರೆ ಗ್ರಾಮೀಣ ಭಾಗದಲ್ಲಿ ನಿತ್ಯವೂ ಅಂತಹದ್ದೇ ಹಲವು ಚಾರ್ಲಿ ಇದೆ. ಮನುಷ್ಯ ಪ್ರೀತಿ, ನಿಷ್ಟೆಯ ನಾಯಿಗಳು ಇವೆ. ಇಲ್ಲೊಂದು ನಾಯಿ 4 ಕಿಮೀ ದೂರು ಸ್ಕೂಟರ್ ಹಿಂದೆ ಓಡಿಕೊಂಡು ಬಂದಿದೆ. ಕಾರಣ ಪ್ರೀತಿ ಮಾತ್ರಾ…!. ಈ ಘಟನೆ ನಡೆದ್ದು ಸುಳ್ಯ ತಾಲೂಕಿನ ಬಳ್ಪ-ಕಮಿಲದಲ್ಲಿ.
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಬಳಿಯ ರತನ್ ಅವರು ಬಳ್ಪಕ್ಕೆ ಹೋಗುತ್ತಿದ್ದರು. ಈ ಸಂದರ್ಭ ನಾಯಿಯೊಂದು ಬಳ್ಪದ ಗೋಪಾಲ್ ಎಂಬವರ ಗ್ಯಾರೇಜ್ ಬಳಿ ಇರುತ್ತಿತ್ತು. ಗ್ಯಾರೇಜ್ ಮಾಲಕರು ಈ ನಾಯಿಗೆ ತಿಂಡಿ ಹಾಕುತ್ತಿದ್ದ ಕಾರಣ ಅದೇ ಆಸುಪಾಸಲ್ಲಿ ಇರುತ್ತಿತ್ತು. ಈ ನಾಯಿಯನ್ನು ರತನ್ ಅವರು ಕೊಂಡೋಗುವಂತೆ ಗೋಪಾಲ್ ಹೇಳಿದ್ದರು. ನಿರಾಕರಿಸಿದ ರತನ್ ನಾಯಿಗೆ ಬಿಸ್ಕೇಟ್ ಹಾಕಿ ಸುಮ್ಮನಿರುತ್ತಿದ್ದರು. ಈಚೆಗೆ ಗ್ಯಾರೇಜಿಗೆ ಹೋಗಿದ್ದ ರತನ್ ವಾಪಾಸ್ ಮನೆಗೆ ಬರುವಾಗ ಸ್ಕೂಟರ್ ಹಿಂದೆಯೇ ಓಡಿ ಬಂದ ನಾಯಿ 4 ಕಿಮೀ ದೂರದಲ್ಲಿರುವ ರತನ್ ಅವರ ಮನೆ ಸೇರಿತು. ರಸ್ತೆ ಬದಿಯಲ್ಲಿ ಓಡುತ್ತಲೇ ಬಂದ ನಾಯಿ ಗಮನ ಸೆಳೆಯಿತು.
ಇದು ಹೆಣ್ಣು ನಾಯಿಯಾದ್ದರಿಂದ ರಸ್ತೆ ಬದಿ ಯಾರೋ ಬಿಟ್ಟು ತೆರಳಿದ್ದರು. ಆದರೆ ನಾಯಿಯ ಪ್ರೀತಿ ಹಾಗೂ ನಿಷ್ಟೆ ಗಮನ ಸೆಳೆಯಿತು. ಈಗ ರತನ್ ಅವರು ಮನೆಯಿಂದ ಹೊರಹೋಗುತ್ತಿವಾಗ ಜೊತೆಯಲ್ಲೇ ಬರುತ್ತದೆ.
ರತನ್ ಅವರು ಪ್ರಾಣಿ ಪ್ರೇಮಿಯೂ ಆಗಿದ್ದಾರೆ. ಬಳ್ಪದ ಕಾಡಿನ ಬಳಿ ಯಾರೋ ಹೋರಿಯನ್ನು ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಅವರು ಮನೆಗೆ ತಂದು ಸಾಕಿದ್ದಾರೆ. ಈಗ ಅವರ ತೋಟದ ಸುತ್ತೆಲ್ಲಾ ಹುಲ್ಲು ಮೇಯುತ್ತಿರುತ್ತದೆ. ಅಂಬು ಎಂದು ಹೆಸರಿಟ್ಟಿದ್ದಾರೆ. ಮನೆಯಿಂದ ಹೆಸರು ಕರೆದ ತಕ್ಷಣ ಅಂಗಳಕ್ಕೆ ಬರುವ ಈ ಕರುವಿನ ಪ್ರೀತಿ ಹೆಚ್ಚು ಗಮನ ಸೆಳೆಯುತ್ತದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…