MIRROR FOCUS

ಸರ್ಕಾರಗಳಿಂದ ಇನ್ನೂ ಬಾರದ ಸೌಲಭ್ಯ | ಅಣೆಕಟ್ಟು ನಿರ್ಮಿಸಿ 800 ಎಕರೆಯಲ್ಲಿ ಕೃಷಿ ಬೆಳೆಯುವ ಗ್ರಾಮಸ್ಥರು..!

Share

ಎಷ್ಟೋ ಹಳ್ಳಿಗಳಲ್ಲಿ(Village) ರೈತರಿಗೆ(Farmer) ಬೇಕಾದ ಸೌಲಭ್ಯಗಳು ಇನ್ನು ಅವರನ್ನು ತಲುಪಿಲ್ಲ. ಹಾಗೆ ಹಳ್ಳಿಗಳ ಕಥೆನೂ ಅದೇ.. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ(Basic amenities) ಅದೆಷ್ಟೋ ಹಳ್ಳಿಗಳ ಜನ ಇಂದು ಬದುಕುತ್ತಿದ್ದಾರೆ. ಕೆಲವೊಮ್ಮೆ ಈ ಸರ್ಕಾರಗಳನ್ನು(Govt)ನಂಬಿದರೆ ಪ್ರಯೋಜನ ಇಲ್ಲ ಎಂದು ತಮಗೆ ಬೇಕಾದ ಕೆಲಸಗಳನ್ನು ತಾವೇ ಒಗ್ಗೂಡಿ ಮಾಡಿಕೊಳ್ಳುತ್ತಾರೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ(Uttara kannada) ಕುಮಟಾದ ಜನ ತಮ್ಮೂರಿಗೆ ಬೇಕಾದ್ದನ್ನು ತಾವೇ ಮಾಡಿಕೊಳ್ಳುವ ಸ್ವಾವಲಂಬಿಗಳು.

Advertisement

ಕುಮಟಾ ತಾಲೂಕಿನ ಬಗ್ಗೋಣ ಎಂಬ ಊರಲ್ಲಿ ಒಂದು ನದಿ(River) ಇದೆ. ಈ ನದಿ ಉಪ್ಪುನೀರು(Salt water) ಹಾಗೂ ಸಿಹಿನೀರಿನ(Sweet water) ಸಂಗಮವಾಗುವ ಜಾಗ. ಬೆಳೆ ಬೆಳೆಯಬೇಕಾದರೆ, ಜನ ಬದುಕಬೇಕಾದರೆ ಸಿಹಿ ನೀರು ಅತ್ಯಗತ್ಯ.  ಇದು ಅನೇಕ ಊರಿಗೆ ಸಂಪರ್ಕ ಕಲ್ಪಿಸೋ ಊರು. ಇಲ್ಲಿ ಸಿಹಿ ನೀರನ್ನು ಹಲಗೆ ಹಾಗೂ ಮಣ್ಣಿನ ತಾತ್ಕಾಲಿಕ ಅಣೆಕಟ್ಟು(Dam) ಮಾಡಿಕೊಂಡು ಸಂಗ್ರಹಿಸಲಾಗುತ್ತಿತ್ತು. ಆದರೆ ಪ್ರತಿ ವರ್ಷ ಮಳೆ(Rain) ಬಂತೆಂದರೆ ಕಟ್ಟ ಪೂರ್ತಿ ಕೊಚ್ಚಿ ಹೋಗಿತ್ತು. ನಂತರ ಪ್ರತಿ ವರ್ಷ ಗ್ರಾಮಸ್ಥರು ತಮ್ಮ ಕೈಯಿಂದಲೇ 50,000-60,000 ಖರ್ಚು ಮಾಡಿ ಹೀಗೆ ಅಣೆಕಟ್ಟನ್ನು ಕಟ್ಟಿಕೊಳ್ಳುತ್ತಾರೆ. ಈ ಪರಿಪಾಠ 10 ವರ್ಷದಿಂದ ಜಾರಿಯಲ್ಲಿದೆ.

ಒಗ್ಗಟಾಗಿ ಸೇತುವೆ ನಿರ್ಮಾಣ : ಬಗ್ಗೋಣ ಊರಿಗೆ ಊರೇ ಒಗ್ಗಟ್ಟಾಗಿ ಈ ಸೇತುವೆ ಕಟ್ಟಿದೆ. ಅಡಿಕೆ ದಬ್ಬೆಗಳನ್ನು ಹಾಗೂ ಮಣ್ಣನ್ನು ಬಳಸಿಕೊಂಡು ಮಾಡಿರುವ ಈ ತಡೆಗೋಡೆಯಿಂದ ಉಪ್ಪು ನೀರು ಬೇರ್ಪಟ್ಟು ಸುಮಾರು 500 ಎಕರೆ ಕೃಷಿ ಭೂಮಿ ಸೇರಿದಂತೆ 800 ಎಕರೆ ಭೂ ಪ್ರದೇಶ ಉಪ್ಪು ನೀರಿನಿಂದ ಮುಕ್ತವಾಗಿದೆ. ಬಗ್ಗೋಣ, ಊರು ಕೇರಿ, ಹೆರವಟ್ಟಾ ಊರಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಜನರೇ ಅಣೆಕಟ್ಟಿನ ತರಹ ರಚನೆಯೊಂದನ್ನು ಮಾಡಿಕೊಂಡು ಅನೇಕರಿಗೆ ಮಾದರಿಯಾಗಿದ್ದಾರೆ. ಈ ಮೂಲಕ 800 ಎಕರೆ ಜಮೀನನ್ನು ಉಪ್ಪು ನೀರಿನಿಂದ ರಕ್ಷಿಸಿಕೊಂಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50…

40 minutes ago

ಹವಾಮಾನ ವರದಿ | 07-04-2025 | ಕೆಲವೆಡೆ ಇಂದೂ ಮಳೆ ನಿರೀಕ್ಷೆ | ಎ.9 ರಿಂದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ |

ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…

5 hours ago

ಜೇನು ಹುಳಗಳ ಸಂಖ್ಯೆ ಗಣನೀಯ ಇಳಿಕೆ | ಜೇನು ಕುಟುಂಬ ಉಳಿಸುವ ಅಭಿಯಾನ |

ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…

7 hours ago

ಹುಲಿಸಂರಕ್ಷಿತ ಪ್ರದೇಶಲ್ಲಿ ರಾತ್ರಿ ಸಂಚಾರ ನಿಷೇಧ | ನಿಷೇಧ ತೆರವುಗೊಳಿಸದಂತೆ ಒತ್ತಾಯಿಸಿ ಪ್ರತಿಭಟನೆ

ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ  ತೆರವುಗೊಳಿಸಬಾರದು ಎಂದು…

12 hours ago

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…

12 hours ago

ದೇಶದ ಜಿಡಿಪಿ 4.5ಲಕ್ಷ ಕೋಟಿ ರೂಪಾಯಿ ಏರಿಕೆ ಸಾಧ್ಯತೆ | ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…

13 hours ago