Advertisement
MIRROR FOCUS

ಸರ್ಕಾರಗಳಿಂದ ಇನ್ನೂ ಬಾರದ ಸೌಲಭ್ಯ | ಅಣೆಕಟ್ಟು ನಿರ್ಮಿಸಿ 800 ಎಕರೆಯಲ್ಲಿ ಕೃಷಿ ಬೆಳೆಯುವ ಗ್ರಾಮಸ್ಥರು..!

Share

ಎಷ್ಟೋ ಹಳ್ಳಿಗಳಲ್ಲಿ(Village) ರೈತರಿಗೆ(Farmer) ಬೇಕಾದ ಸೌಲಭ್ಯಗಳು ಇನ್ನು ಅವರನ್ನು ತಲುಪಿಲ್ಲ. ಹಾಗೆ ಹಳ್ಳಿಗಳ ಕಥೆನೂ ಅದೇ.. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ(Basic amenities) ಅದೆಷ್ಟೋ ಹಳ್ಳಿಗಳ ಜನ ಇಂದು ಬದುಕುತ್ತಿದ್ದಾರೆ. ಕೆಲವೊಮ್ಮೆ ಈ ಸರ್ಕಾರಗಳನ್ನು(Govt)ನಂಬಿದರೆ ಪ್ರಯೋಜನ ಇಲ್ಲ ಎಂದು ತಮಗೆ ಬೇಕಾದ ಕೆಲಸಗಳನ್ನು ತಾವೇ ಒಗ್ಗೂಡಿ ಮಾಡಿಕೊಳ್ಳುತ್ತಾರೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ(Uttara kannada) ಕುಮಟಾದ ಜನ ತಮ್ಮೂರಿಗೆ ಬೇಕಾದ್ದನ್ನು ತಾವೇ ಮಾಡಿಕೊಳ್ಳುವ ಸ್ವಾವಲಂಬಿಗಳು.

ಕುಮಟಾ ತಾಲೂಕಿನ ಬಗ್ಗೋಣ ಎಂಬ ಊರಲ್ಲಿ ಒಂದು ನದಿ(River) ಇದೆ. ಈ ನದಿ ಉಪ್ಪುನೀರು(Salt water) ಹಾಗೂ ಸಿಹಿನೀರಿನ(Sweet water) ಸಂಗಮವಾಗುವ ಜಾಗ. ಬೆಳೆ ಬೆಳೆಯಬೇಕಾದರೆ, ಜನ ಬದುಕಬೇಕಾದರೆ ಸಿಹಿ ನೀರು ಅತ್ಯಗತ್ಯ.  ಇದು ಅನೇಕ ಊರಿಗೆ ಸಂಪರ್ಕ ಕಲ್ಪಿಸೋ ಊರು. ಇಲ್ಲಿ ಸಿಹಿ ನೀರನ್ನು ಹಲಗೆ ಹಾಗೂ ಮಣ್ಣಿನ ತಾತ್ಕಾಲಿಕ ಅಣೆಕಟ್ಟು(Dam) ಮಾಡಿಕೊಂಡು ಸಂಗ್ರಹಿಸಲಾಗುತ್ತಿತ್ತು. ಆದರೆ ಪ್ರತಿ ವರ್ಷ ಮಳೆ(Rain) ಬಂತೆಂದರೆ ಕಟ್ಟ ಪೂರ್ತಿ ಕೊಚ್ಚಿ ಹೋಗಿತ್ತು. ನಂತರ ಪ್ರತಿ ವರ್ಷ ಗ್ರಾಮಸ್ಥರು ತಮ್ಮ ಕೈಯಿಂದಲೇ 50,000-60,000 ಖರ್ಚು ಮಾಡಿ ಹೀಗೆ ಅಣೆಕಟ್ಟನ್ನು ಕಟ್ಟಿಕೊಳ್ಳುತ್ತಾರೆ. ಈ ಪರಿಪಾಠ 10 ವರ್ಷದಿಂದ ಜಾರಿಯಲ್ಲಿದೆ.

ಒಗ್ಗಟಾಗಿ ಸೇತುವೆ ನಿರ್ಮಾಣ : ಬಗ್ಗೋಣ ಊರಿಗೆ ಊರೇ ಒಗ್ಗಟ್ಟಾಗಿ ಈ ಸೇತುವೆ ಕಟ್ಟಿದೆ. ಅಡಿಕೆ ದಬ್ಬೆಗಳನ್ನು ಹಾಗೂ ಮಣ್ಣನ್ನು ಬಳಸಿಕೊಂಡು ಮಾಡಿರುವ ಈ ತಡೆಗೋಡೆಯಿಂದ ಉಪ್ಪು ನೀರು ಬೇರ್ಪಟ್ಟು ಸುಮಾರು 500 ಎಕರೆ ಕೃಷಿ ಭೂಮಿ ಸೇರಿದಂತೆ 800 ಎಕರೆ ಭೂ ಪ್ರದೇಶ ಉಪ್ಪು ನೀರಿನಿಂದ ಮುಕ್ತವಾಗಿದೆ. ಬಗ್ಗೋಣ, ಊರು ಕೇರಿ, ಹೆರವಟ್ಟಾ ಊರಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಜನರೇ ಅಣೆಕಟ್ಟಿನ ತರಹ ರಚನೆಯೊಂದನ್ನು ಮಾಡಿಕೊಂಡು ಅನೇಕರಿಗೆ ಮಾದರಿಯಾಗಿದ್ದಾರೆ. ಈ ಮೂಲಕ 800 ಎಕರೆ ಜಮೀನನ್ನು ಉಪ್ಪು ನೀರಿನಿಂದ ರಕ್ಷಿಸಿಕೊಂಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

4 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

5 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

7 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

8 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

8 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

8 hours ago