Advertisement
MIRROR FOCUS

ಸರ್ಕಾರಗಳಿಂದ ಇನ್ನೂ ಬಾರದ ಸೌಲಭ್ಯ | ಅಣೆಕಟ್ಟು ನಿರ್ಮಿಸಿ 800 ಎಕರೆಯಲ್ಲಿ ಕೃಷಿ ಬೆಳೆಯುವ ಗ್ರಾಮಸ್ಥರು..!

Share

ಎಷ್ಟೋ ಹಳ್ಳಿಗಳಲ್ಲಿ(Village) ರೈತರಿಗೆ(Farmer) ಬೇಕಾದ ಸೌಲಭ್ಯಗಳು ಇನ್ನು ಅವರನ್ನು ತಲುಪಿಲ್ಲ. ಹಾಗೆ ಹಳ್ಳಿಗಳ ಕಥೆನೂ ಅದೇ.. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ(Basic amenities) ಅದೆಷ್ಟೋ ಹಳ್ಳಿಗಳ ಜನ ಇಂದು ಬದುಕುತ್ತಿದ್ದಾರೆ. ಕೆಲವೊಮ್ಮೆ ಈ ಸರ್ಕಾರಗಳನ್ನು(Govt)ನಂಬಿದರೆ ಪ್ರಯೋಜನ ಇಲ್ಲ ಎಂದು ತಮಗೆ ಬೇಕಾದ ಕೆಲಸಗಳನ್ನು ತಾವೇ ಒಗ್ಗೂಡಿ ಮಾಡಿಕೊಳ್ಳುತ್ತಾರೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ(Uttara kannada) ಕುಮಟಾದ ಜನ ತಮ್ಮೂರಿಗೆ ಬೇಕಾದ್ದನ್ನು ತಾವೇ ಮಾಡಿಕೊಳ್ಳುವ ಸ್ವಾವಲಂಬಿಗಳು.

ಕುಮಟಾ ತಾಲೂಕಿನ ಬಗ್ಗೋಣ ಎಂಬ ಊರಲ್ಲಿ ಒಂದು ನದಿ(River) ಇದೆ. ಈ ನದಿ ಉಪ್ಪುನೀರು(Salt water) ಹಾಗೂ ಸಿಹಿನೀರಿನ(Sweet water) ಸಂಗಮವಾಗುವ ಜಾಗ. ಬೆಳೆ ಬೆಳೆಯಬೇಕಾದರೆ, ಜನ ಬದುಕಬೇಕಾದರೆ ಸಿಹಿ ನೀರು ಅತ್ಯಗತ್ಯ.  ಇದು ಅನೇಕ ಊರಿಗೆ ಸಂಪರ್ಕ ಕಲ್ಪಿಸೋ ಊರು. ಇಲ್ಲಿ ಸಿಹಿ ನೀರನ್ನು ಹಲಗೆ ಹಾಗೂ ಮಣ್ಣಿನ ತಾತ್ಕಾಲಿಕ ಅಣೆಕಟ್ಟು(Dam) ಮಾಡಿಕೊಂಡು ಸಂಗ್ರಹಿಸಲಾಗುತ್ತಿತ್ತು. ಆದರೆ ಪ್ರತಿ ವರ್ಷ ಮಳೆ(Rain) ಬಂತೆಂದರೆ ಕಟ್ಟ ಪೂರ್ತಿ ಕೊಚ್ಚಿ ಹೋಗಿತ್ತು. ನಂತರ ಪ್ರತಿ ವರ್ಷ ಗ್ರಾಮಸ್ಥರು ತಮ್ಮ ಕೈಯಿಂದಲೇ 50,000-60,000 ಖರ್ಚು ಮಾಡಿ ಹೀಗೆ ಅಣೆಕಟ್ಟನ್ನು ಕಟ್ಟಿಕೊಳ್ಳುತ್ತಾರೆ. ಈ ಪರಿಪಾಠ 10 ವರ್ಷದಿಂದ ಜಾರಿಯಲ್ಲಿದೆ.

ಒಗ್ಗಟಾಗಿ ಸೇತುವೆ ನಿರ್ಮಾಣ : ಬಗ್ಗೋಣ ಊರಿಗೆ ಊರೇ ಒಗ್ಗಟ್ಟಾಗಿ ಈ ಸೇತುವೆ ಕಟ್ಟಿದೆ. ಅಡಿಕೆ ದಬ್ಬೆಗಳನ್ನು ಹಾಗೂ ಮಣ್ಣನ್ನು ಬಳಸಿಕೊಂಡು ಮಾಡಿರುವ ಈ ತಡೆಗೋಡೆಯಿಂದ ಉಪ್ಪು ನೀರು ಬೇರ್ಪಟ್ಟು ಸುಮಾರು 500 ಎಕರೆ ಕೃಷಿ ಭೂಮಿ ಸೇರಿದಂತೆ 800 ಎಕರೆ ಭೂ ಪ್ರದೇಶ ಉಪ್ಪು ನೀರಿನಿಂದ ಮುಕ್ತವಾಗಿದೆ. ಬಗ್ಗೋಣ, ಊರು ಕೇರಿ, ಹೆರವಟ್ಟಾ ಊರಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಜನರೇ ಅಣೆಕಟ್ಟಿನ ತರಹ ರಚನೆಯೊಂದನ್ನು ಮಾಡಿಕೊಂಡು ಅನೇಕರಿಗೆ ಮಾದರಿಯಾಗಿದ್ದಾರೆ. ಈ ಮೂಲಕ 800 ಎಕರೆ ಜಮೀನನ್ನು ಉಪ್ಪು ನೀರಿನಿಂದ ರಕ್ಷಿಸಿಕೊಂಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

17 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago