Photo - News 18
ಎಷ್ಟೋ ಹಳ್ಳಿಗಳಲ್ಲಿ(Village) ರೈತರಿಗೆ(Farmer) ಬೇಕಾದ ಸೌಲಭ್ಯಗಳು ಇನ್ನು ಅವರನ್ನು ತಲುಪಿಲ್ಲ. ಹಾಗೆ ಹಳ್ಳಿಗಳ ಕಥೆನೂ ಅದೇ.. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ(Basic amenities) ಅದೆಷ್ಟೋ ಹಳ್ಳಿಗಳ ಜನ ಇಂದು ಬದುಕುತ್ತಿದ್ದಾರೆ. ಕೆಲವೊಮ್ಮೆ ಈ ಸರ್ಕಾರಗಳನ್ನು(Govt)ನಂಬಿದರೆ ಪ್ರಯೋಜನ ಇಲ್ಲ ಎಂದು ತಮಗೆ ಬೇಕಾದ ಕೆಲಸಗಳನ್ನು ತಾವೇ ಒಗ್ಗೂಡಿ ಮಾಡಿಕೊಳ್ಳುತ್ತಾರೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ(Uttara kannada) ಕುಮಟಾದ ಜನ ತಮ್ಮೂರಿಗೆ ಬೇಕಾದ್ದನ್ನು ತಾವೇ ಮಾಡಿಕೊಳ್ಳುವ ಸ್ವಾವಲಂಬಿಗಳು.
ಕುಮಟಾ ತಾಲೂಕಿನ ಬಗ್ಗೋಣ ಎಂಬ ಊರಲ್ಲಿ ಒಂದು ನದಿ(River) ಇದೆ. ಈ ನದಿ ಉಪ್ಪುನೀರು(Salt water) ಹಾಗೂ ಸಿಹಿನೀರಿನ(Sweet water) ಸಂಗಮವಾಗುವ ಜಾಗ. ಬೆಳೆ ಬೆಳೆಯಬೇಕಾದರೆ, ಜನ ಬದುಕಬೇಕಾದರೆ ಸಿಹಿ ನೀರು ಅತ್ಯಗತ್ಯ. ಇದು ಅನೇಕ ಊರಿಗೆ ಸಂಪರ್ಕ ಕಲ್ಪಿಸೋ ಊರು. ಇಲ್ಲಿ ಸಿಹಿ ನೀರನ್ನು ಹಲಗೆ ಹಾಗೂ ಮಣ್ಣಿನ ತಾತ್ಕಾಲಿಕ ಅಣೆಕಟ್ಟು(Dam) ಮಾಡಿಕೊಂಡು ಸಂಗ್ರಹಿಸಲಾಗುತ್ತಿತ್ತು. ಆದರೆ ಪ್ರತಿ ವರ್ಷ ಮಳೆ(Rain) ಬಂತೆಂದರೆ ಕಟ್ಟ ಪೂರ್ತಿ ಕೊಚ್ಚಿ ಹೋಗಿತ್ತು. ನಂತರ ಪ್ರತಿ ವರ್ಷ ಗ್ರಾಮಸ್ಥರು ತಮ್ಮ ಕೈಯಿಂದಲೇ 50,000-60,000 ಖರ್ಚು ಮಾಡಿ ಹೀಗೆ ಅಣೆಕಟ್ಟನ್ನು ಕಟ್ಟಿಕೊಳ್ಳುತ್ತಾರೆ. ಈ ಪರಿಪಾಠ 10 ವರ್ಷದಿಂದ ಜಾರಿಯಲ್ಲಿದೆ.
ಒಗ್ಗಟಾಗಿ ಸೇತುವೆ ನಿರ್ಮಾಣ : ಬಗ್ಗೋಣ ಊರಿಗೆ ಊರೇ ಒಗ್ಗಟ್ಟಾಗಿ ಈ ಸೇತುವೆ ಕಟ್ಟಿದೆ. ಅಡಿಕೆ ದಬ್ಬೆಗಳನ್ನು ಹಾಗೂ ಮಣ್ಣನ್ನು ಬಳಸಿಕೊಂಡು ಮಾಡಿರುವ ಈ ತಡೆಗೋಡೆಯಿಂದ ಉಪ್ಪು ನೀರು ಬೇರ್ಪಟ್ಟು ಸುಮಾರು 500 ಎಕರೆ ಕೃಷಿ ಭೂಮಿ ಸೇರಿದಂತೆ 800 ಎಕರೆ ಭೂ ಪ್ರದೇಶ ಉಪ್ಪು ನೀರಿನಿಂದ ಮುಕ್ತವಾಗಿದೆ. ಬಗ್ಗೋಣ, ಊರು ಕೇರಿ, ಹೆರವಟ್ಟಾ ಊರಿನ ಜನ ಇದರ ಲಾಭ ಪಡೆಯುತ್ತಿದ್ದಾರೆ. ಜನರೇ ಅಣೆಕಟ್ಟಿನ ತರಹ ರಚನೆಯೊಂದನ್ನು ಮಾಡಿಕೊಂಡು ಅನೇಕರಿಗೆ ಮಾದರಿಯಾಗಿದ್ದಾರೆ. ಈ ಮೂಲಕ 800 ಎಕರೆ ಜಮೀನನ್ನು ಉಪ್ಪು ನೀರಿನಿಂದ ರಕ್ಷಿಸಿಕೊಂಡಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…