ಪ್ರಮುಖ

#Success | ಕೃಷಿ ವಿಜ್ಞಾನಿಗಳಿಂದ ಮೆಚ್ಚುಗೆ ಪಡೆದ ರೈತ | ಬದನೆ ಕಾಂಡದಲ್ಲಿ ಟೊಮೆಟೋ ಬೆಳೆದ ಕೃಷಿಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅನಾದಿಕಾಲದಿಂದ ಕೃಷಿಯೇ ರೈತರ ಬದುಕು. ಕಾಲಕ್ಕೆ ತಕ್ಕಂತೆ ಒಂದಷ್ಟು ಪ್ರಯೋಗಗಳನ್ನು ಮಾಡುತ್ತ, ಪ್ರಕೃತಿಗೆ ಹೊಂದಿಕೊಂಡು ಕೃಷಿಯನ್ನು ಅಭಿವೃದ್ಧಿ ಮಾಡುತ್ತಾ ಬಂದಿದ್ದಾನೆ. ಒಂದೇ ರೀತಿಗೆ ಜೋತು ಬಿದ್ದು ಕೃಷಿ ಮಾಡಿದ್ರೆ ಈಗಿನ ಕಾಲದಲ್ಲಿ ಫಲ ಸಿಗುವುದು ಬಹಳ ವಿರಳ. ವಿಶೇಷ, ವಿಶಿಷ್ಟ ಪ್ರಯೋಗಗಳನ್ನು ಮಾಡಿದ್ರೆ ರೈತ ಹೊಸತನದೊಂದಿಗೆ ತನಗೆ ಕೃಷಿಯಲ್ಲಿ ಲಾಭವನ್ನು ಮಾಡಿಕೊಳ್ಳಬಹುದು.

Advertisement

ಇಲ್ಲೊಬ್ಬ ರೈತ ಆಳವಡಿಸಿದ ಪ್ರಯೋಗಕ್ಕೆ ಕೃಷಿ ವಿಜ್ಞಾನಿಗಳೇ ಶಾಕ್ ಆಗಿ ಬೇರೆಯವರು ಅದನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ.  ಹಾಗೆ ಈ ರೈತ ಬೆಳೆದ ರೀತಿಯನ್ನು ನಮ್ಮ ಕರಾವಳಿಯಲ್ಲೂ ಅಳವಡಿಸಿಕೊಂಡು ಟೊಮೆಟೋ ಬೆಳೆಯಬಹುದೇನೋ ಅನ್ನಿಸುತ್ತದೆ.

ಬೇರೆ ರೈತರೂ ಇದನ್ನು ಅಳಡಿಸಿಕೊಂಡರೆ ಉತ್ತಮ ಆದಾಯವೂ ಬರುತ್ತದೆ ಎಂಬುದು ಕೃಷಿ ವಿಜ್ಞಾನಿಗಳ ಸಲಹೆಯಾಗಿದೆ. ವಿಭಿನ್ನ, ವಿಶೇಷವಾಗಿ ತರಕಾರಿ ಬೆಳೆಯುವಲ್ಲಿ ಪರಿಣಿತಿ ಹೊಂದಿರುವ ಕೋಲಾರ ರೈತರು ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರ್ತಾರೆ. ಹೀಗೆ ಕಸಿ ಮಾಡಿದ ಬದನೇಕಾಯಿ ಕಾಂಡದಲ್ಲಿ ಟೊಮೆಟೊ ಬೆಳೆದಿರುವ ಕೋಲಾರದ ರೈತನೀಗ ಲಕ್ಷ ಲಕ್ಷ ಲಾಭ ಗಳಿಸ್ತಿದ್ದಾರೆ.

ಕೋಲಾರ ಜಿಲ್ಲೆಯು ಅತಿ ಹೆಚ್ಚು ತರಕಾರಿಗಳನ್ನು ಬೆಳೆಯುವುದಕ್ಕೆ ಹೆಸರುವಾಸಿಯಾಗಿದೆ. ಹಾಗೆಯೇ ಕೋಲಾರ ಮಾರುಕಟ್ಟೆ ಏಷ್ಯಾದ 2ನೇ ಅತಿ ದೊಡ್ಡ ಮಾರುಕಟ್ಟೆಯೂ ಇದೆ, ಶ್ರಮಜೀವಿಗಳಂತೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಿರುತ್ತಾರೆ ಇಲ್ಲಿಯ ರೈತರು. ಇದಕ್ಕೆ ಸಾಕ್ಷಿಯೆಂಬಂತೆ ಕೋಲಾರದ ರೈತರೊಬ್ಬರು ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬದನೆಕಾಯಿ ಕಾಂಡದಲ್ಲಿ ಟೊಮೆಟೊ ಬೆಳೆದು ಯಶಸ್ವಿಯಾಗಿದ್ದಾರೆ.

Advertisement

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೊತ್ತಪೇಟೆ ಗ್ರಾಮದ ರೈತ ನಾರಾಯಣಸ್ವಾಮಿ ಎಂಬುವರು ಬದನೆಕಾಯಿಯ ಕಾಂಡದಲ್ಲಿ ಟೊಮೆಟೊ ಬೆಳೆದು ಭರ್ಜರಿ ಇಳುವರಿ ಪಡೆದಿದ್ದಾರೆ. ಈಗ ಮಾರುಕಟ್ಟೆಯಲ್ಲಿಯೂ ಟೊಮೆಟೊಗೆ ಡಿಮ್ಯಾಂಡ್ ಹೆಚ್ಚಾಗಿದ್ದು ಉತ್ತಮ ಆದಾಯವನ್ನೂ ಗಳಿಸಿದ್ದಾರೆ.  ಕಪ್ಪು ಬದನೆಕಾಯಿ ಗಿಡದ ಕಾಂಡದಲ್ಲಿ ಸಾಹೋ ಜಾತಿಯ ಟೊಮೆಟೊವನ್ನು ಬೆಳೆಯಲಾಗಿದೆ. ಆಂಧ್ರದ ಕುಪ್ಪಂನ ಕೃಷಿ ಪರಿಣಿತರು ಕೇಂದ್ರದಿಂದ ಈ ತಳಿಯನ್ನು ತಂದಿದ್ದು ಒಂದು ಗಿಡಕ್ಕೆ ಅಲ್ಲಿಯೇ 6.25 ರೂಪಾಯಿ ಹಣ ಖರ್ಚಾಗಿದೆ. ಸಾರಿಗೆ ವೆಚ್ಚವೆಲ್ಲಾ ಸೇರಿ ತೋಟಕ್ಕೆ ಬರುವಷ್ಟರಲ್ಲಿ ಒಂದು ಗಿಡಕ್ಕೆ 8 ರೂಪಾಯಿ ಖರ್ಚು ತಗುಲಿದೆ. ಇದುವರೆಗೂ 15 ಲಕ್ಷ ರೂಪಾಯಿ ಆದಾಯ ಬಂದಿದೆ. ಇನ್ನೂ ನಾಲ್ಕು ಕೊಯ್ಲು ಸಿಗಲಿದ್ದು ಈಗ ಮಾರುಕಟ್ಟೆಯಲ್ಲಿ ಬೆಲೆಯೂ ಹೆಚ್ಚಿರುವ ಕಾರಣ ಅಂದಾಜು 3 ಲಕ್ಷ ರೂಪಾಯಿ ಸಿಗುತ್ತದೆ ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬದನೆ ನಮ್ಮ ಕರಾವಳಿಯಲ್ಲಿ ಸಾಮಾನ್ಯವಾಗಿ ಹೆಚ್ಚಿನ ಕಡೆ ಬೆಳೆಯುತ್ತದೆ. ಆದರೆ ಟೊಮೆಟೋ ನಮ್ಮ ೂರಿನಲ್ಲಿ ಒಗ್ಗುವುದಿಲ್ಲ. ಈ ರೈತ ಮಾಡಿದಂತೆ ಬದನೆ ಗಿಡಕ್ಕೆ ಅಥವಾ ನಮ್ಮ ಕುದನೆ ಗಿಡಕ್ಕೆ ಟೊಮೆಟೋ ಕಸಿ ಮಾಡಿದ್ರೆ ನಮ್ಮ ಕರಾವಳಿಯಲ್ಲೂ ವ್ಯಾಪಾರಕ್ಕೆ ಅಲ್ಲದಿದ್ರು ನಮ್ಮ ಮನೆ ಬಳಕೆಗಾದ್ರು ಬೆಳೆಯಬಹುದೇನೋ.

(ಮೂಲ : ಅಂತರ್ಜಾಲ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

5 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

5 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

5 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

5 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

19 hours ago