Advertisement
MIRROR FOCUS

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

Share

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple cropping) ಸೇರಿದಂತೆ ಕೃಷಿಯ ಹಲವು ಪದ್ಧತಿಗಳಿಗೆ ರೈತರು ಸಾಮಾನ್ಯವಾಗಿ ಹೆಚ್ಚು ಗಮನ ನೀಡುವುದಿಲ್ಲ. ಈ ಬಗ್ಗೆ ರೈತರು ಚಿತ್ತ ಹರಿಸಿದರೆ ಒಂದು ಬೆಳೆ ಕೈಕೊಟ್ಟರೂ ಮತ್ತೊಂದು ಬೆಳೆ ಕೈ ಹಿಡಿಯುತ್ತದೆ ಎನ್ನುವುದು ಕೃಷಿ ತಜ್ಞರ(Agricultural expert) ಮಾತು. ಆದರೆ ರೈತರು ಮಾತ್ರ ಈ ರೀತಿಯ ವೈವಿಧ್ಯಮಯ ಕೃಷಿಯತ್ತ ಮುಖ ಮಾಡುವುದು ಕಡಿಮೆ. ಆದರೆ ಇದೇ ಬಹುಬೆಳೆ ಬೇಸಾಯದ ಮೂಲಕ ಹಾವೇರಿ ತಾಲೂಕಿನ ಆಲದಕಟ್ಟಿಯ ರೈತ ಚಂದ್ರಶೇಖರ ಅಗಡಿ ಬಂಪರ್ ಬೆಳೆ ಬೆಳೆದಿದ್ದಾರೆ.

ಈ ರೈತ ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸಿಮೆಣಸಿನಕಾಯಿ, ಒಂದು ಎಕರೆಯಲ್ಲಿ ಮಾವು, ಅಡಿಕೆ, ಚಿಕ್ಕು, ಕಬ್ಬು ಸೇರಿದಂತೆ ಬಹುಬೆಳೆ ಬೆಳೆದು ಫಸಲು ತೆಗೆದಿದ್ದಾರೆ. ಇವರು ಬೆಳೆದ ಹಸಿಮೆಣಸಿನಕಾಯಿಗೆ ಬಂಪರ್ ಬೆಲೆಯೂ ಬಂದಿದೆ. ಪ್ರತಿ ಎಕರೆಗೆ ಒಂದು ಲಕ್ಷ ರೂಪಾಯಿಯಂತೆ ಆದಾಯ ಪಡೆದಿದ್ದಾರೆ. ಕಳೆದ ಹಲವು ವರ್ಷಗಳಿಂದ ರೈತ ಚಂದ್ರಶೇಖರ ಹಸಿಮೆಣಸಿನಕಾಯಿ ಬೆಳೆಯುತ್ತಿದ್ದಾರೆ. ಆದರೆ ಪ್ರಸ್ತುತ ವರ್ಷ ಬಿಸಿಲಿನ ಪ್ರಖರತೆ ಅಧಿಕವಾಗಿದ್ದು ರೋಗ-ರುಜಿನಗಳೂ ಅಧಿಕವಾಗಿದ್ದವು. ಈ ಸಂದರ್ಭದಲ್ಲಿ ಇವರ ಕೈ ಹಿಡಿದಿದ್ದು ಸಾವಯುವ ಕೃಷಿ ಪದ್ದತಿ ಮತ್ತು ಜೈವಿಕ ಗೊಬ್ಬರಗಳು.ಹೌದು, ಚಂದ್ರಶೇಖರ ತಮ್ಮ ಜಮೀನುಗಳಿಗೆ ಬಳಸುವುದು ತಿಪ್ಪೆ ಗೊಬ್ಬರ ಮತ್ತು ಕೋಳಿಗೊಬ್ಬರ. ತಮ್ಮ ಮನೆಯಲ್ಲಿ ಜಾನುವಾರುಗಳ ಗೊಬ್ಬರ ಕಡಿಮೆಯಾದರೆ ಬೇರೆ ರೈತರಿಂದ ತಿಪ್ಪೆಗೊಬ್ಬರ ಖರೀದಿಸಿ ಚಂದ್ರಶೇಖರ ತಮ್ಮ ಜಮೀನಿಗೆ ಹಾಕಿದ್ದಾರೆ. ಇದರ ಪರಿಣಾಮ ಎರಡು ಎಕರೆಯಲ್ಲಿ ಹಸಿಮೆಣಸಿನಕಾಯಿ ಗಿಡಗಳು ನಳನಳಿಸುತ್ತಿವೆ. ಜೊತೆಗೆ ಗಿಡಗಳ ತುಂಬಾ ಮೆಣಸಿನಕಾಯಿ ಬಿಟ್ಟಿದ್ದು ರೈತನಿಗೆ ಅಧಿಕ ಲಾಭ ಸಿಕ್ಕಿದೆ.
ಮೊದಲ ಬಾರಿ 40 ಕ್ವಿಂಟಲ್ ಹಸಿಮೆಣಸಿನಕಾಯಿ ಕಟಾವ್ ಮಾಡಲಾಗಿದೆ. ಎರಡನೇ ಬಾರಿಯೂ 40 ಕ್ವಿಂಟಲ್ ಕಟಾವ್ ಮಾಡಿದ್ದಾರೆ. ಉಳಿದಂತೆ, ಇನ್ನೂ 20 ಕ್ಟಿಂಟಲ್ ಹಿಡಿದರೆ ಈ ವರ್ಷ ಎರಡು ಎಕರೆಗೆ ನೂರು ಕ್ವಿಂಟಲ್ ಹಸಿಮೆಣಸಿನಕಾಯಿ ಬೆಳೆದಂತಾಗುತ್ತದೆ.ಕಳೆದ ಬಾರಿ ಮಾರಾಟ ಮಾಡಿದಾಗ ಕ್ವಿಂಟಲ್‌ಗೆ 3,500 ರೂಪಾಯಿ ದರದಂತೆ ಹಸಿಮೆಣಸಿನಕಾಯಿ ಮಾರಾಟ ಮಾಡಿದ್ದಾರೆ. ಈ ಬಾರಿ ಕ್ವಿಂಟಲ್‌ಗೆ 3,000 ದರದಂತೆ ಆದಾಯ ಲಭಿಸಿದೆ. ಜೈವಿಕ ಉತ್ಪನ್ನಗಳ ಬಳಕೆಯಿಂದ ಅಧಿಕ ಇಳುವರಿ ಪಡೆದಿದ್ದೇವೆ ಎನ್ನುತ್ತಾರೆ ರೈತ ಚಂದ್ರಶೇಖರ. ಉಷ್ಣಾಂಶ ಅಧಿಕವಾದಾಗ ಮೆಣಸಿನಕಾಯಿ ಬೆಳೆಯಲ್ಲಿ ರಸಹೀರುವ ಕೀಟಗಳು ಅಧಿಕ. ಕೆಂಪುನೊಣ ಬಿಳಿಜೇಡಗಳ ಕಾಟವೂ ವಿಪರೀತ. ಇದರಿಂದ ಗಿಡಕ್ಕೆ ಎಲೆಮುಟುರು ರೋಗ ಮತ್ತು ಕಾಯಿಗಳ ಗಾತ್ರ ಕಡಿಮೆ ಗಾತ್ರವಾಗಿ ಇಳುವರಿ ಕುಂಠಿತವಾಗುತ್ತದೆ. ಆದರೆ ಚಂದ್ರಶೇಖರ್ ಅವರು​ ಸಾವಯುವ ಗೊಬ್ಬರ ಮತ್ತು ಜೈವಿಕ ಉತ್ಪನ್ನಗಳ ಬಳಕೆಯಿಂದ ಗಿಡಗಳನ್ನು ಹಲವು ರೋಗಗಳಿಂದ ರಕ್ಷಿಸಿದ್ದಾರೆ. ಜೊತೆಗೆ ಬೂದಿರೋಗ, ಕೀಟಭಾದೆ ಹಾಗೂ ಶಿಲೀಂಧ್ರ ಭಾದೆಯಿಂದ ಮೆಣಸಿನಕಾಯಿ ಬೆಳೆ ರಕ್ಷಿಸಿಕೊಂಡಿದ್ದಾರೆ.ಪರಿಣಾಮ, ಇವರ ಎರಡೆಕರೆ ಜಮೀನಿನಲ್ಲಿ ಹಸಿಮೆಣಸಿನಕಾಯಿ ಇಳುವರಿ ಉತ್ತಮವಾಗಿ ಬಂದಿದ್ದು ಒಳ್ಳೆ ಆದಾಯ ದೊರೆತಿದೆ.
ಇದಕ್ಕೆಲ್ಲ ರಾಸಾಯನಿಕ ಉತ್ಪನ್ನಗಳ ಕಡಿಮೆ ಬಳಕೆ ಮತ್ತು ಹೆಚ್ಚು ಜೈವಿಕ ಉತ್ಪನ್ನಗಳ ಅಧಿಕ ಬಳಕೆ ಕಾರಣ ಎನ್ನುತ್ತಾರೆ ಚಂದ್ರಶೇಖರ ಅಗಡಿ. ಒಟ್ಟಿನಲ್ಲಿ ಇವರ ಈ ಬಹುಬೆಳೆ ಪದ್ಧತಿ, ಸಾವಯುವ ಹಾಗೂ ಜೈವಿಕ ಉತ್ಪನ್ನಗಳ ಬಳಕೆ ಉಳಿದ ಜಿಲ್ಲೆಯ ರೈತರಿಗೆ ಮಾದರಿಯಾಗಿದೆ.
Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago